ಶಿವಮೊಗ್ಗ: ಹಿಜಾಬ್ ವಿವಾದವಾಗುವ ವಿಷಯವೇ ಅಲ್ಲ. ಮುಸ್ಲಿಂ ಹೆಣ್ಮಕ್ಕಳು ಕಾಲೇಜಿನಲ್ಲಿ ಹಿಜಾಬ್ ಧರಿಸುತ್ತಿರುವುದು ಕೂಡ ಹೊಸದೇನಲ್ಲ. ಸಮವಸ್ತ್ರದ ದುಪ್ಪಟ್ಟಾದಲ್ಲಿ ತಲೆ ಮುಚ್ಚಿಕೊಂಡರೆ ಸಮಸ್ಯೆ ಏನು? ಇಲ್ಲಿ ಸಮಸ್ಯೆ ಹಿಜಾಬ್ನದ್ದಲ್ಲ, ಮನಸ್ಥಿತಿಯದ್ದು. ಏಕಾಏಕಿ ಹಿಜಾಬ್ ಸಮಸ್ಯೆಯಾಗಿ ಉಲ್ಬಣಗೊಂಡಿದ್ದು ಯಾಕೆ?
ಈ ಹಿಂದೆ ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಹಿಜಾಬ್ ವಿವಾದ ಉಂಟಾದಾಗ ಶೀಘ್ರವೇ ಬಗೆಹರಿದಿದೆ. ಆದರೆ ಕರಾವಳಿಯಲ್ಲಿ ಮಾತ್ರ ಇದು ಉಲ್ಬಣವಾಗುತ್ತಿರುವುದೇಕೆ ಎನ್ನುವುದನ್ನು ಬಿಡಿಸಿ ಹೇಳಬೇಕಿಲ್ಲ. ವಿದ್ಯಾರ್ಥಿಗಳ ಹೆಗಲ ಮೇಲೆ ಬಂದೂಕು ಇಟ್ಟು ತಮ್ಮ ಕಾರ್ಯ ಸಾಧಿಸುವವರ ಬಗ್ಗೆ ಪ್ರಜ್ಞಾವಂತರು ಎಚ್ಚೆತ್ತುಕೊಳ್ಳಬೇಕು. ಕ್ಯಾಂಪಸ್ಗಳನ್ನು ಪ್ರಯೋಗ ಶಾಲೆಗಳನ್ನಾಗಿ ಮಾಡುವ ಕುತ್ಸಿತ ಮನಸ್ಸುಗಳ ಷಡ್ಯಂತ್ರವನ್ನು ಆರಿತುಕೊಳ್ಳಬೇಕು.
ಸಂವಿಧಾನಬದ್ಧ ಹಕ್ಕುಗಳು ಇರುವಾಗ ಇಲ್ಲಿ ಆಯ್ಕೆಯ ಪ್ರಶ್ನೆ ಉದ್ಭವಿಸುವುದಿಲ್ಲ. ಹಿಜಾಬ್ ಮುಖ್ಯವೋ? ಶಿಕ್ಷಣ ಮುಖ್ಯವೋ? ಎನ್ನುವ ಪ್ರಶ್ನೆಗಳು ಅಲ್ಪಸಂಖ್ಯಾತ ಸಮುದಾಯವನ್ನು ಇನ್ನಷ್ಟು ದುರ್ಬಲಗೊಳಿಸುವ ತಂತ್ರ ಮಾತ್ರವಲ್ಲದೇ, ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಕುತಂತ್ರವೂ ಹೌದು.
ಹಿಜಾಬ್ ಧರಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಕ್ಯಾಂಪಸ್ನೊಳಗೆ ಪ್ರವೇಶ ನಿರಾಕರಿಸಿದ ಪ್ರಾಂಶುಪಾಲರ ಮನಸ್ಥಿತಿ ನಿಜಕ್ಕೂ ಗಾಬರಿ ಹುಟ್ಟಿಸುವಂಥದ್ದು. ಭಾರತದಂಥ ಪ್ರಜಾಸತಾತ್ಮಕ ರಾಷ್ಟ್ರದಲ್ಲಿ ಇಂಥ ಸರ್ವಾಧಿಕಾರಿ ಧೋರಣೆ ಒಪ್ಪಿಕೊಳ್ಳುವಂಥದ್ದಲ್ಲ. ಬಟ್ಟೆಯ ಕಾರಣಕ್ಕೆ ಶಿಕ್ಷಣದ ಮೂಲಭೂತ ಹಕ್ಕನ್ನು ಕಿತ್ತುಕೊಂಡಿರುವುದು ಐತಿಹಾಸಿಕ ದುರಂತ. ಆಸಕ್ತರು ಹಿಜಾಬ್ ಧರಿಸುವುದರಿಂದ ಇತರ ಯಾರಿಗೂ ತೊಂದರೆಯುಂಟು ಮಾಡುವುದಿಲ್ಲ. ಆದುದರಿಂದ ಸಮವಸ್ತ್ರ ಬಣ್ಣದ ಹಿಜಾಬ್ ಧರಿಸಲು ವಿದ್ಯಾರ್ಥಿನಿಯರಿಗೆ ಅವಕಾಶ ಕೊಡುವುದೊಂದೇ ಈ ವಿವಾದಕ್ಕೆ ಪರಿಹಾರ.
ಲತೀಫ್ ಸಅದಿ
ಅಧ್ಯಕ್ಷರು SSF ಕರ್ನಾಟಕ ರಾಜ್ಯ

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ