ನವದೆಹಲಿ,ಫೆ.7-ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವ ಕುರಿತಾಗಿ ಹೈಕೋರ್ಟ್ ನೀಡುವ ತೀರ್ಪಿನ ತನಕ ವಿದ್ಯಾರ್ಥಿಗಳು ಶಾಂತಿ ರೀತಿಯಿಂದ ವರ್ತಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ನಾನು ಹೆಚ್ಚು ಪ್ರತಿಕ್ರಿಯಿಸಲಾರೆ. ಅಂತಿಮವಾಗಿ ನ್ಯಾಯಾಲಯ ನೀಡುವ ತೀರ್ಪಿಗೆ ಸರ್ಕಾರ ಬದ್ದವಾಗಿರುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಪ್ರಚೋದನೆಗೆ ಒಳಗಾಗದೆ ಸಂಯಮವನ್ನು ಕಾಪಾಡಿಕೊಳ್ಳಬೇಕು. ಅನಗತ್ಯವಾಗಿ ಶಾಲಾಕಾಲೇಜುಗಳ ಬಗ್ಗೆ ಗೊಂದಲ ಸೃಷ್ಟಿಸಿ ಬೇರೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆ ಕೊಡಬೇಡಿ ಎಂದು ಕಿವಿಮಾತು ಹೇಳಿದರು.ಹಿಜಾಬ್ ಧರಿಸುವ ಕುರಿತಂತೆ ದೇಶಾದ್ಯಂತ ಚರ್ಚೆಯಾಗಿದೆ. ಕೇರಳ ಮತ್ತು ಮಹಾರಾಷ್ಟ್ರ ನ್ಯಾಯಾಲಯ ಇದರ ಬಗ್ಗೆ ತೀರ್ಪನ್ನು ಕೂಡ ಕೊಟ್ಟಿದೆ. ಕೆಲವು ವಿದ್ಯಾರ್ಥಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಪ್ರಾಯಶಃ ಎರಡುಮೂರು ದಿನದೊಳಗೆ ತೀರ್ಪು ಬರಬಹುದು. ಅಲ್ಲಿಯವರೆಗೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡಿದರು.
ಶಾಲಾಕಾಲೇಜುಗಳಲ್ಲಿ ಸಮವಸ್ತ್ರ ಕುರಿತಾಗಿ ರಾಜ್ಯ ಸರ್ಕಾರ ಮೂರು ದಿನಗಳ ಹಿಂದೆಯಷ್ಟೇ ಅಸೂಚನೆಯನ್ನು ಸಹ ಹೊರಡಿಸಿದೆ. ಆಡಳಿತ ಮಂಡಳಿಯವರು ಹಾಗೂ ಎಸ್ಡಿಎಂಸಿಯವರು ತಮ್ಮ ಕಾಲೇಜು ಅನುಗುಣವಾಗಿ ಸಮವಸ್ತ್ರ ಬಗ್ಗೆ ತೀರ್ಮಾನಿಸುತ್ತಾರೆ ಎಂದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ