ಚಿಕ್ಕಮಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಮೊದಲಿನಿಂದಲೂ ಧರಿಸಿ ಬರುತ್ತಿರುವ ಹಿಜಾಬ್ಗೆ ವಿರೋಧ ಮಾಡಬಾರದು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ‘ನೀಲಿ ಶಾಲು’ ಧರಿಸಿ ಕಾಲೇಜಿಗೆ ಬಂದಿದ್ದಾರೆ. ‘ಜೈ ಭೀಮ್’, ‘ಜೈ ಅಂಬೇಡ್ಕರ್’ ಎಂದು ಕೂಗಿ ಹಿಜಾಬ್ಗೆ ಬೆಂಬಲ ಸೂಚಿಸಿರುವುದು ಹೊಸ ಸಂಚಲನ ಮೂಡಿಸಿದೆ.
ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜಿನ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಘೋಷಣೆ ಕೂಗಿದ್ದಾರೆ. ಹಿಜಾಬ್ ವಿರೋಧಿಸಿ ಕೇಸರಿ ಶಾಲು ಹಾಕಿಕೊಂಡು ಬರುತ್ತಿದ್ದ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್ ವಿರೋಧಿಸಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಕಾಲೇಜಿನಲ್ಲಿ ಹಿಜಾಬ್ಗೆ ಅವಕಾಶ ನೀಡಬಾರದು ಎಂದು ಕೆಲ ವಿದ್ಯಾರ್ಥಿಗಳು ಆಗ್ರಹಿಸಿದರು.
ಹಿಜಾಬ್ ನಮ್ಮ ಹಕ್ಕು ಎಂದು ತೆಗೆಯಲ್ಲ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದರು. ಕಾಲೇಜಿನಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಇತ್ತು. ಐಡಿಎಸ್ಜಿ ಕಾಲೇಜಿನಲ್ಲಿನ ಹಲವು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್ಗೆ ಬೆಂಬಲ ವ್ಯಕ್ತಪಡಿಸಿದರು. ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.
ಈ ನಡುವೆ ಕೇಸರಿ ಹಾಗೂ ನೀಲಿ ಶಾಲುಗಳ ನಡುವೆ ಧರಿಸಿದವರು ಮುಖಾಮುಖಿಯಾಗಿರುವ ವಿಡಿಯೊಗಳು ಹರಿದಾಡಿವೆ. ನೀಲಿ ಶಾಲು ಧರಿಸಿದ ವಿದ್ಯಾರ್ಥಿಗಳು ‘ಒಂದೇ ಮಾತರಂ’, ‘ಭಾರತ್ ಮಾತಾ ಕೀ ಜೈ’, ‘ಜೈ ಭೀಮ್’, ‘ಜೈ ಅಂಬೇಡ್ಕರ್’ ಎಂಬ ಘೋಷಣೆ ಮೊಳಗಿಸಿದ್ದಾರೆ. ಇದು ಕೇಸರಿ ಪಾಲಯಕ್ಕೆ ತಲೆನೋವಾಗಿದೆ.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ