ಚಿಕ್ಕಮಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಮೊದಲಿನಿಂದಲೂ ಧರಿಸಿ ಬರುತ್ತಿರುವ ಹಿಜಾಬ್ಗೆ ವಿರೋಧ ಮಾಡಬಾರದು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ‘ನೀಲಿ ಶಾಲು’ ಧರಿಸಿ ಕಾಲೇಜಿಗೆ ಬಂದಿದ್ದಾರೆ. ‘ಜೈ ಭೀಮ್’, ‘ಜೈ ಅಂಬೇಡ್ಕರ್’ ಎಂದು ಕೂಗಿ ಹಿಜಾಬ್ಗೆ ಬೆಂಬಲ ಸೂಚಿಸಿರುವುದು ಹೊಸ ಸಂಚಲನ ಮೂಡಿಸಿದೆ.
ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜಿನ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಘೋಷಣೆ ಕೂಗಿದ್ದಾರೆ. ಹಿಜಾಬ್ ವಿರೋಧಿಸಿ ಕೇಸರಿ ಶಾಲು ಹಾಕಿಕೊಂಡು ಬರುತ್ತಿದ್ದ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್ ವಿರೋಧಿಸಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಕಾಲೇಜಿನಲ್ಲಿ ಹಿಜಾಬ್ಗೆ ಅವಕಾಶ ನೀಡಬಾರದು ಎಂದು ಕೆಲ ವಿದ್ಯಾರ್ಥಿಗಳು ಆಗ್ರಹಿಸಿದರು.
ಹಿಜಾಬ್ ನಮ್ಮ ಹಕ್ಕು ಎಂದು ತೆಗೆಯಲ್ಲ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದರು. ಕಾಲೇಜಿನಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಇತ್ತು. ಐಡಿಎಸ್ಜಿ ಕಾಲೇಜಿನಲ್ಲಿನ ಹಲವು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್ಗೆ ಬೆಂಬಲ ವ್ಯಕ್ತಪಡಿಸಿದರು. ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.
ಈ ನಡುವೆ ಕೇಸರಿ ಹಾಗೂ ನೀಲಿ ಶಾಲುಗಳ ನಡುವೆ ಧರಿಸಿದವರು ಮುಖಾಮುಖಿಯಾಗಿರುವ ವಿಡಿಯೊಗಳು ಹರಿದಾಡಿವೆ. ನೀಲಿ ಶಾಲು ಧರಿಸಿದ ವಿದ್ಯಾರ್ಥಿಗಳು ‘ಒಂದೇ ಮಾತರಂ’, ‘ಭಾರತ್ ಮಾತಾ ಕೀ ಜೈ’, ‘ಜೈ ಭೀಮ್’, ‘ಜೈ ಅಂಬೇಡ್ಕರ್’ ಎಂಬ ಘೋಷಣೆ ಮೊಳಗಿಸಿದ್ದಾರೆ. ಇದು ಕೇಸರಿ ಪಾಲಯಕ್ಕೆ ತಲೆನೋವಾಗಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ