ನವದೆಹಲಿ: ಹಿಜಾಬ್ ಕಾರಣಕ್ಕೆ ಹೆಣ್ಣುಮಕ್ಕಳಿಗೆ ಶಾಲೆ ಪ್ರವೇಶ ನಿರ್ಬಂಧಿಸಿರುವುದು ಅತ್ಯಂತ ಭೀಕರ ಎಂದ ಪಾಕಿಸ್ತಾನದ ನೊಬೆಲ್ ಶಾಂತೆ ಪುರಸ್ಕೃತೆ ಮಲಾಲಾ ಯೂಸುಫ್ ಝಾಯಿ ಹೇಳಿದ್ದಾರೆ.
ಹಿಜಾಬ್ ವಿವಾದ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕಾಲೇಜುಗಳು ನಮಗೆ ಶಿಕ್ಷಣ ಮತ್ತು ಹಿಜಾಬ್ ನಡುವಿನ ಆಯ್ಕೆಯನ್ನು ಹೇರುತ್ತಿವೆ. ಹೆಣ್ಣು ಮಕ್ಕಳನ್ನು ಅವರ ಹಿಜಾಬ್ ಕಾರಣಕ್ಕಾಗಿ ಶಾಲೆಗೆ ಪ್ರವೇಶ ನೀಡದೇ ಇರುವುದು ಅತ್ಯಂತ ಭೀಕರ. ಕಡಿಮೆ ಅಥವಾ ಹೆಚ್ಚು ಬಟ್ಟೆ ಧರಿಸುವುದಕ್ಕಾಗಿ ಮಹಿಳೆಯರನ್ನು ಟೀಕಿಸುವ ಸಂಪ್ರದಾಯ ಮುಂದುವರೆದಿದೆ. ಮುಸ್ಲಿಂ ಮಹಿಳೆಯರನ್ನು ಅಲ್ಪವಾಗಿ ಕಾಣುವ ನೀತಿಯನ್ನು ಭಾರತೀಯ ನಾಯಕರು ನಿಲ್ಲಿಸಬೇಕು ಎಂದು ಹೇಳಿದ್ದಾರೆ.
ಉಡುಪಿಯ ಮಹಿಳಾ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಧ್ಯಾಪಕನೋರ್ವನಿಗೆ ದಿಢೀರ್ ಉಂಟಾದ ಹಿಜಾಬ್ ಅಲರ್ಜಿಯು, ಅದೇ ಕಾಲೇಜಿನ ಪ್ರಾಂಶುಪಾಲರು ಅದ್ಯಾಪಕನನ್ನು ಬೆಂಬಲಿಸಿ, ಹಿಂದಿನಿಂದಲೂ ಶಿರ ವಸ್ತ್ರವನ್ನು ಧರಿಸಿ ಕಾಲೇಜಿಗೆ ಬರುತ್ತಿದ್ದ ಮುಸ್ಲಿಮ್ ವಿದ್ಯಾರ್ಥಿನಿಗಳನ್ನು ಏಕಾಏಕಿ ಕಾಲೇಜ್ ಪ್ರವೇಶವನ್ನು ತಡೆದು ಇಡೀ ರಾಜ್ಯಕ್ಕೇ ಬೆಂಕಿ ಹಚ್ಚಿದ್ದಾರೆ.
ಇಂತಹಾ ಕೋಮುವಾದಿ ಅದ್ಯಾಪಕರು ವಿದ್ಯಾ ದೇಗುಲಕ್ಕೆ ಮಾರಕ, ಇಡೀ ಅದ್ಯಾಪಕ ವೃಂದಕ್ಕೆ ನಾಚಿಕೆಗೇಡು, ಶಿಕ್ಷಣಕ್ಕಾಗಿ ಬಾಗಿಲನ್ನು ತೆರೆಯಬೇಕಿದ್ದ ಅದ್ಯಾಪಕ, ವಿದ್ಯಾರ್ಥಿನಿಗಳ ಮುಂದೆ ಗೇಟು ಮುಚ್ಚಿದ ಘಟನೆ ಇಡೀ ದೇಶಕ್ಕೇ ಕಪ್ಪು ಚುಕ್ಕೆಯಾಗಿದೆ. ಕೇವಲ ಎರಡು ತಿಂಗಳು ಮಾತ್ರ ಉಳಿದಿರುವ ಸದ್ರಿ ಶೈಕ್ಷಣಿಕ ವರ್ಷದ ವಿದ್ಯಾರ್ಥಿನಿಗಳ ಕಲಿಕೆಯನ್ನು ತಡೆದ ಪ್ರಕರಣವು ಇಂದು ಹೈಕೋರ್ಟ್ ಮೆಟ್ಟಲೇರಿದೆ. ವಿದ್ಯಾರ್ಥಿಗಳು ತಮ್ಮ ಧಾರ್ಮಿಕ ಹಕ್ಕನ್ನು ಕೋರ್ಟ್ ಕಾಪಾಡಿ, ಕಲಿಕೆಯನ್ನು ಮುಂದುವರಿಸಬಹುದೆಂಬ ಶುಭ ನಿರೀಕ್ಷೆಯಲ್ಲಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ