ಕುಶಾಲನಗರ : ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿದ್ಯಾರ್ಜನೆಗೈಯ್ಯುತ್ತಿರುವ ಎಸ್ಸೆಸ್ಸೆಫ್ ಕಾರ್ಯಕರ್ತನಾದ ರಾಝಿಕ್ ನ ಮೇಲೆ RSS ಗೂಂಡಾ ಕಾರ್ಯಕರ್ತರು ಹಾಸ್ಟೆಲ್ ಗೆ ನುಗ್ಗಿ ದಾಂಧಲೆ ನಡೆಸಿ ಹಲ್ಲೆಗೈದಿರುವ ಘಟನೆ ನಡೆದಿದ್ದು SSF ಕೊಡಗು ಜಿಲ್ಲಾಧ್ಯಕ್ಷರಾದ ಶಾಫಿ ಸಅದಿ ಸೋಮವಾರಪೇಟೆರವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಪಾನಮತ್ತನಾಗಿ ಬಂದ ಸಹಪಾಠಿಯೊಬ್ಬನೊಂದಿಗೆ ಕ್ಷುಲ್ಲಕ ವಿಚಾರಕ್ಕಾಗಿ ವಾಗ್ವಾದಗಳು ನಡೆದಿದ್ದು, ಇದನ್ನೇ ಬಂಡವಾಳ ಮಾಡಿಕೊಂಡು ಕೆಲವು ಆರೆಸ್ಸೆಸ್ಸ್ ಗೂಂಡಾಗಳು ವಿದ್ಯಾರ್ಥಿಯ ಮೇಲೆ ಹಲ್ಲೆಗೈದಿರುವುದು ಅಕ್ಷಮ್ಯ ಅಪರಾಧವಾಗಿದೆ,ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಅಕ್ರಮವಾಗಿ ಹಾಸ್ಟೆಲ್ ಪ್ರವೇಶಿಸಿ ಅಲ್ಲಿನ ಬಾಗಿಲು ಮುರಿದು ಹಲ್ಲೆಗೈದಿರುವುದು ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ ಸೃಷ್ಟಿಸಿದೆ,ಯಾವುದೋ ವಿಚಾರಕ್ಕೆ ಉಂಟಾದ ವಾಗ್ವಾದವನ್ನು ಕೇಸರಿ ಶಾಲಿಗೆ ತಂದು ನೈತಿಕ ಪೋಲಿಸ್ ಗಿರಿ ಮಾಡಿ ಹಲ್ಲೆ ನಡೆಸಲು ಇವರಿಗೆ ಅವಕಾಶ ಕೊಟ್ಟವರಾರು..? ಇದರಲ್ಲಿ ಭಾಗಿಯಾದ ಪ್ರತಿಯೊಬ್ಬ ಅಪರಾಧಿಗಳನ್ನು ಕೂಡಲೇ ಬಂಧಿಸದಿದ್ದಲ್ಲಿ ತೀವ್ರ ಪ್ರತಿಭಟನೆ ಮೂಲಕ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಹಾಸ್ಟೆಲ್ ನಲ್ಲಿ ಹಲವು ವಿದ್ಯಾರ್ಥಿಗಳು ಮದ್ಯಪಾನ ಮಾಡುವವರಿದ್ದಾರೆ ಹಾಗೂ ಇನ್ನಿತರ ಮಾದಕ ಚಟಗಳಿಗೆ ಬಲಿಯಾಗಿದ್ದಾರೆಯೇ ಎಂಬುದನ್ನು ಕೂಡ ಪರೀಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ