ಬೆಂಗಳೂರು: ಶಾಲೆ ಕಾಲೇಜುಗಳಲ್ಲಿ ಸಮವಸ್ತ್ರವಿದ್ದರೂ ಹಿಜಾಬ್ ಧರಿಸಲು ಅವಕಾಶ ನೀಡುವ ಕುರಿತಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್, ಗುರುವಾರ ಮಧ್ಯಂತರ ಆದೇಶ ನೀಡಿದೆ. ಈ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹೇಳಿದ್ದಾರೆ.
ಪ್ರಕರಣದ ಮುಂದಿನ ವಿಚಾರಣೆಯನ್ನು ಸೋಮವಾರ (ಫೆ.14) ಮುಂದುವರಿಸಲಾಗುವುದು ಎಂದು ಸಿಜೆ ನೇತೃತ್ವದ ಮೂವರು ಸದಸ್ಯರ ವಿಸ್ತೃತ ನ್ಯಾಯಪೀಠ ನೀಡಿದೆ. ಸಂಪೂರ್ಣ ವಿಚಾರಣೆ ಮುಗಿಸಿ ಅಂತಿಮ ಆದೇಶ ನೀಡುವವರೆಗೂ ವಿದ್ಯಾರ್ಥಿಗಳು ಹಿಜಾಬ್ ಅಥವಾ ಶಾಲಿನಂತಹ ಧಾರ್ಮಿಕ ಗುರುತುಗಳನ್ನು ಧರಿಸಿ ಶಾಲೆಗೆ ಹೋಗುವಂತಿಲ್ಲ ಎಂದು ಅದು ಸೂಚನೆ ನೀಡಿದೆ.
ಕರ್ನಾಟಕದಲ್ಲಿ ಶಾಂತಿ ನೆಲೆಸಬೇಕು. ಸೋಮವಾರದಿಂದ ಪ್ರತಿದಿನ ವಿಚಾರಣೆ ನಡೆಸುತ್ತೇವೆ. ಸದ್ಯಕ್ಕೆ ಮಧ್ಯಂತರ ಆದೇಶ ಕೊಡಲು ಇಚ್ಛಿಸುತ್ತೇವೆ. ವಿಚಾರಣೆ ಮುಂದಿಯುವವರೆಗೆ ಯಾವುದೇ ಧಾರ್ಮಿಕ ಗುರುತುಗಳನ್ನು ಬಳಸಬಾರದು. ರಾಜ್ಯದಲ್ಲಿ ಆದಷ್ಟೂ ಬೇಗ ಶಾಲಾ ಕಾಲೇಜುಗಳು ಮತ್ತೆ ಆರಂಭವಾಗಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹೇಳಿದರು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ದೇವದತ್ ಕಾಮತ್, ಇಸ್ಲಾಂ ಧಾರ್ಮಿಕ ನಂಬಿಕೆಗಳ ಪ್ರಕಾರ ಪತಿ, ತಂದೆ, ಪತಿಯ ತಂದೆ, ಮಕ್ಕಳು ಸೇರಿದಂತೆ ಕೆಲ ನಿರ್ದಿಷ್ಟ ವ್ಯಕ್ತಿಗಳ ಎದುರು ಮಾತ್ರ ಮಹಿಳೆ ಹಿಜಾಬ್ ಧರಿಸದಂತೆ ಕಾಣಿಸಿಕೊಳ್ಳಲು ಅವಕಾಶವಿದೆ. ನಿರ್ದಿಷ್ಟಪಡಿಸಿದ ವ್ಯಕ್ತಿಗಳನ್ನು ಬಿಟ್ಟು ಉಳಿದವರ ಮುಂದೆ ಹಿಜಾಬ್ ಕಡ್ಡಾಯವಾಗಿದೆ. ಮದ್ರಾಸ್ ಹೈಕೋರ್ಟ್ನ ವಿಭಾಗೀಯ ಪೀಠ ತೀರ್ಪು ಸಹ ಇದಕ್ಕೆ ಪೂರಕವಾಗಿದೆ. ಧರ್ಮಕ್ಕೆ ನಂಬಿಕೆಯೇ ಆಧಾರ ಎಂದು ಹೇಳಿದ ಅವರು ಜೊರಾಷ್ಟ್ರಿಯನ್ ಧರ್ಮದ ನಂಬಿಕೆ ರಾಷ್ಟ್ರಗೀತೆ ಹಾಡಲು ಅವಕಾಶ ಕೊಡುವುದಿಲ್ಲ ಎನ್ನುವುದನ್ನು ಸುಪ್ರೀಂಕೋರ್ಟ್ ಸಹ ಗುರುತಿಸಿದೆ ಎಂದರು.
ಅರ್ಜಿದಾರರ ಪರ ವಾದ ಮಂಡಿಸಿದ ಮತ್ತೋರ್ವ ವಕೀಲ ಸಂಜಯ್ ಹೆಗ್ಡೆ, ಶಾಲೆಗಳಲ್ಲಿ ಮೊದಲು ಸಮವಸ್ತ್ರ ಎಂಬುದು ಇರಲಿಲ್ಲ. ತಮಿಳುನಾಡಿನಲ್ಲಿ ಮೊದಲಿಗೆ ಅದು ಶುರುವಾಯಿತು. 1995ರಲ್ಲಿ ಕರ್ನಾಟಕ ಸರ್ಕಾರ ನಿಯಮಗಳನ್ನು ರೂಪಿಸಿತು. ಸಮವಸ್ತ್ರವನ್ನು 5 ವರ್ಷಗಳಿಗೆ ಒಮ್ಮೆ ಬದಲಿಸಬೇಕು. ಕಾಯ್ದೆಯಲ್ಲಿ ಶಾಲೆಗಳಿಗೆ ಸಮವಸ್ತ್ರ ಸಂಬಂಧ ಕೆಲ ಸೂಚನೆಗಳಿವೆ. ಆದರೆ ಪಿಯು ಕಾಲೇಜುಗಳಿಗೆ ಸಮವಸ್ತ್ರ ಸಂಬಂಧ ಯಾವುದೇ ನಿಯಮಗಳಿಲ್ಲ. ಹೃದಯ ವೈಶಾಲ್ಯತೆ ಇಲ್ಲದೇ ಈ ದೇಶದ ಬೆಳವಣಿಗೆ ಸಾಧ್ಯವಿಲ್ಲ ಎಂದು ಹೇಳಿದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?