ಮಂಗಳೂರು: 2019 ನವೆಂಬರ್ 24ರಂದು ಸೌದಿ ಅರೇಬಿಯಾದ ಅಲ್-ಖೋಬಾರ್, ದಹ್’ರಾನ್ ನಲ್ಲಿ ಕೃಷ್ಣಾಪುರದ ಮುಹಮ್ಮದ್ ನೌಶೀದ್ ರವರು ರಸ್ತೆ ಅಪಘಾತದಲ್ಲಿ ಮರಣ ಹೊಂದಿದ್ದರು. ಮರಣ ಹೊಂದಿದ ಮೂರೇ ದಿನಗಳಲ್ಲಿ ಅದಕ್ಕೆ ಬೇಕಾದ ದಾಖಲೆಗಳನ್ನು ಸರಿಪಡಿಸಿ ಜುಬೈಲ್ ನಲ್ಲಿ ಅವರ ದಫನ ಮಾಡಲಾಗಿದೆ.
ಈ ಅಪಘಾತಕ್ಕೆ ಸಂಬಂಧಿಸಿದ ಪರಿಹಾರ ಧನಕ್ಕೆ ಬೇಕಾದ ದಾಖಲೆಗಳು ಹಾಗೂ ಇನ್ನಿತರ ಕಾರ್ಯಗಳನ್ನು ಮಾಡುವ ಜವಾಬ್ದಾರಿಯನ್ನು ನೌಶೀದ್ ರವರ ಕುಟುಂಬದವರು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸೌದಿ ಅರೇಬಿಯಾ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಮುಹಮ್ಮದ್ ಮಲೆಬೆಟ್ಟು ರವರಿಗೆ ವಹಿಸಿ ಕೊಟ್ಟಿದ್ದರು.
ಅದರಂತೆ ಮುಹಮ್ಮದ್ ಮಲೆಬೆಟ್ಟು ರವರ ಕಳೆದ ಎರಡು ವರ್ಷಗಳ ಸತತ ಪ್ರಯತ್ನದಿಂದ ನೌಶೀದ್ ರವರ ಕುಟುಂಬಕ್ಕೆ ಪರಿಹಾರವಾಗಿ 3 ಲಕ್ಷ ಸೌದಿ ಅರೇಬಿಯಾ ರಿಯಾಲ್ (58,56,200 ರೂಪಾಯಿ) ಸಿಕ್ಕಿರುತ್ತದೆ.
ಈ ಮೊತ್ತವನ್ನು 2022 ಫೆಬ್ರವರಿ 04 ರಂದು ಕೃಷ್ಣಾಪುರದ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಅಲ್ಲಿನ ಅಧ್ಯಕ್ಷರಾದ ಮುಮ್ತಾಝ್ ಅಲಿ, ಇಮಾಮ್ ಫಾರೂಕ್ ಸಖಾಫಿ ಉಸ್ತಾದರು ಜಮಾಅತಿನವರ ಸಮ್ಮುಖದಲ್ಲಿ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.ವೀಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಕಲ್ಚರಲ್ ಫೌಂಡೇಶನ್ ಅನಿವಾಸಿ ಕನ್ನಡಿಗರಿಗೆ ನೆರಳಾಗಿ ವಿದೇಶದಲ್ಲಿ ಕಾರ್ಯಾಚರಿಸುತ್ತಿದೆ. ಇದರ ಸೌದಿ ಅರೇಬಿಯಾ ರಾಷ್ಟ್ರೀಯ ಸಮಿತಿಯ ಸತತ ಪ್ರಯತ್ನದಿಂದಾಗಿ ಇಂದು ಈ ಪರಿಹಾರ ಧನ ನೌಶೀದ್ ರವರ ಕುಟುಂಬಕ್ಕೆ ಸಿಗುವಂತಾಗಿದೆ ಎಂದು ಹಸ್ತಾಂತರ ಸಮಯದಲ್ಲಿ ಮುಮ್ತಾಝ್ ಅಲಿಯವರು ಹೇಳಿದರು.
ಈ ಪರಿಹಾರ ಧನ ಸಿಗಲು ಎರಡು ವರ್ಷಗಳಿಂದ ಪ್ರಯತ್ನಿಸಿದ ಸೌದಿ ರಾಷ್ಟ್ರೀಯ ಸಮಿತಿ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಮುಹಮ್ಮದ್ ಮಲೆಬೆಟ್ಟು ರವರನ್ನು ದಮ್ಮಾಮ್ ಝೋನ್ ಹಾಗೂ ಸೌದಿ ರಾಷ್ಟ್ರೀಯ ಸಮಿತಿ ನೇತಾರರು ಅಭಿನಂದಿಸಿದ್ದಾರೆ.
ವೀಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್