ಬೆಂಗಳೂರು: ಹಿಜಾಬ್ ವಿವಾದ ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಮಧ್ಯೆ ಪ್ರವೇಶಿಸಬೇಕೆಂದು ಯುವ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿಶ್ರೀನಿವಾಸ್ ಇಂದು ಶುಕ್ರವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿ ಹಿಜಾಬ್ ಸಂಘರ್ಷಕ್ಕೆ ಇತಿಶ್ರೀ ಹಾಡಬೇಕೆಂದು ಕೋರಿದ್ದಾರೆ.
ರಾಜ್ಯದಲ್ಲಿ ಹಿಜಾಬ್ ಧರಿಸುವುದರ ಕುರಿತು ನಡೆಯುತ್ತಿರುವ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ನಿಯಮವನ್ನು ಪ್ರಶ್ನಿಸಿ ಮತ್ತು ಹೈಕೋರ್ಟ್ ನ ಮಧ್ಯಂತರ ಮೌಖಿಕ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಹೊಸ ಅರ್ಜಿಯನ್ನು ಸಲ್ಲಿಸಲಾಯಿತು.
ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವಂತೆ ಕಪಿಲ್ ಸಿಬಲ್ ಮನವಿ
ರಾಷ್ಟ್ತವ್ಯಾಪಿ ಚರ್ಚೆಗೆ ಗ್ರಾಸವಾಗಿರುವ ಹಿಜಾಬ್ ವಿವಾದ ಪ್ರಕರಣವನ್ನು ಪ್ರಮುಖ ನ್ಯಾಯವಾದಿ ಹಾಗೂ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ನಿನ್ನೆ ಸುಪ್ರೀಂ ಕೋರ್ಟ್ ಅಂಗಳಕ್ಕೆ ಎಳೆದಿದ್ದರು.
ಪರೀಕ್ಷಾ ಸಮಯದಲ್ಲಿ ಹಿಜಾಬ್ ಆತಂಕ ವಿದ್ಯಾರ್ಥಿಗಳನ್ನು ಕಾಡುತ್ತಿದೆ. ಹೀಗಾಗಿ ಸುಪ್ರೀಂ ಕೋರ್ಟ್ ನಲ್ಲಿ ಈ ಪ್ರಕರಣದ ವಿಚಾರಣೆ ನಡೆಸಬೇಕೆಂದು ಕಪಿಲ್ ಸಿಬಲ್ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದರು.
ಆದರೆ ಸುಪ್ರೀಂ ಕೋರ್ಟ್ ಹಿಬಾಜ್ ಪ್ರಕರಣದ ವಿಚಾರಣೆಗೆ ನಿರಾಕರಿಸಿದ್ದು, ಕರ್ನಾಟಕ ಹೈಕೋರ್ಟ್ ನಲ್ಲಿ ಈಗಾಗಲೇ ಪ್ರಕರಣ ವಿಚಾರಣೆಯ ಹಂತದಲ್ಲಿದೆ. ಹೀಗಾಗಿ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ನಿರಾಕರಿಸಿತ್ತು. ಮುಂದೇ ಏನು ಮಾಡಬಹುದೆಂದು ಪರಿಶೀಲಿಸಲಾಗುತ್ತದೆ ಎಂದಿತ್ತು.
ಇದೀಗ ರಾಜ್ಯ ಹೈಕೋರ್ಟ್ ನ ಮಧ್ಯಂತರ ಮೌಖಿಕ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದ್ದು, ಸುಪ್ರೀಂ ಕೋರ್ಟ್ ನ ಮುಂದಿನ ನಡೆ ಏನೆಂಬುದನ್ನು ಕಾದು ನೋಡಬೇಕಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)