ಎಸ್.ಎಸ್.ಎಫ್ ಬೆಳ್ಳಾರೆ ಸೆಕ್ಟರ್ ಇದರ ವಾರ್ಷಿಕ ಮಹಾ ಸಭೆಯು ದಿನಾಂಕ 10/02/2022 ರಂದು ಗುರುವಾರ ಮಗ್ರಿಬ್ ನಮಾಝಿನ ಬಳಿಕ ಸುನ್ನಿ ಸೆಂಟರ್ನಲ್ಲಿ ಸೆಕ್ಟರ್ ಅಧ್ಯಕ್ಷರಾದ ರಫೀಖ್ ಅಂಜದಿ ಇಂದ್ರಾಜೆ ಯವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸುಳ್ಯ ಡಿವಿಶನ್ ಕಾರ್ಯದರ್ಶಿ ಜುನೈದ್ ಸಖಾಫಿ ಜೀರ್ಮುಖಿ ಕಾರ್ಯಕ್ರಮ ಉಧ್ಘಾಟಿಸಿ ಕಾರ್ಯಕರ್ತರಿಗೆ ಕೆಲವು ಹಿತವಚನಗಳನ್ನು ನೀಡಿದರು.ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಶಮೀರ್ ಕೆ.ಎಂ ವರದಿ ಹಾಗೂ ಲೆಕ್ಕಪತ್ರ ವಾಚಿಸಿದರು.
ಡಿವಿಷನ್ ನಾಯಕರೂ ಸೆಕ್ಟರ್ ಉಸ್ತುವಾರಿಗಳೂ ಆದ ನೌಷಾದ್ ಕೆರೆಮೂಲೆಯವರ ಮುಂದಾಲುತ್ವದಲ್ಲಿ ಸೆಕ್ಟರ್ ಸಮಿತಿಯನ್ನು ಬರ್ಖಾಸ್ತುಗೊಳಿಸಿ ,ನೂತನ ಸಮಿತಿಯನ್ನು ಆರಿಸಲಾಯಿತು.
ಅಧ್ಯಕ್ಷರಾಗಿ ರಿಯಾನ್ ಸಹದಿ ತಂಬಿನಮಕ್ಕಿ,ಪ್ರಧಾನ ಕಾರ್ಯದರ್ಶಿಯಾಗಿ ನೌಷಾದ್ ಅಹ್ಸನಿ ಬೆಳ್ಳಾರೆ,ಕೋಶಾಧಿಕಾರಿಯಾಗಿ ಶಮೀರ್ ಪಳ್ಳಿಮಜಲ್ ರನ್ನೂ ವಿವಿಧ ಎಭಾಗಗಳಿಗೆ 8 ಕಾರ್ಯದರ್ಶಿಗಳನ್ನೂ,ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.ಬಳಿಕ ಡಿವಿಶನ್ ಅಧ್ಯಕ್ಷರಾದ ಫೈಝಲ್ ಝುಹ್ರಿ ಅವರಿಂದ ಸಂಘಟನಾ ತರಗತಿ ನಡೆಯಿತು.ಡಿವಿಶನ್ ನಾಯಕರಾದ ಹಸೈನಾರ್ ನೆಲ್ಲಿಕ್ಕಟ್ಟೆ,ಕೆ.ಸಿ .ಎಫ್ ನಾಯಕರಾದ ಲತೀಫ್ ಬಿಸ್ಮಿಲ್ಲಾ ಬೆಳ್ಳಾರೆ ಮುಂತಾದ ನಾಯಕರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ರಿಯಾನ್ ಸಹದಿ ಸ್ವಾಗತಿಸಿ ನೂತನ ಪ್ರಧಾನ ಕಾರ್ಯದರ್ಶಿ ನೌಷಾದ್ ಅಹ್ಸನಿ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ