ವರದಿ: ಅದ್ದಿ ಬೊಳ್ಳೂರು.ಸುರತ್ಕಲ್, ಫೆ.12: ಸುರತ್ಕಲ್, ಎನ್ಐಟಿಕೆ ಅಕ್ರಮ ಟೋಲ್ ಗೇಟು ಸ್ಥಗಿತಗೊಳಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಆಸಿಫ್ ಆಪತ್ಬಾಂಧವ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯು ಶನಿವಾರ ಆರನೇ ದಿನಕ್ಕೆ ಕಾಲಿರಿಸಿದೆ.ಕಳೆದ ಹಲವಾರು ವರ್ಷಗಳಿಂದ ಎನ್ಐಟಿಕೆ ಅಕ್ರಮ ಅವೈಜ್ಞಾನಿಕ ಟೋಲ್ ಗೇಟ್ ವಿರುದ್ಧ ವಿವಿಧ ಸಂಘಟಿತ ಹೋರಾಟ ನಡೆಯುತ್ತಿದೆ, ಆದರೆ ರಾಜಕೀಯ ಪ್ರಭಾವದಿಂದಾಗಿ ಸರಕಾರದ ಕಾನೂನುಗಳನ್ನು ಮೀರಿ ಇಲ್ಲಿ ಅಕ್ರಮವಾಗಿ ಶುಲ್ಕ ವಸೂಲು ಮಾಡಲಾಗುತ್ತಿದೆ, ಈ ಟೋಲ್ ಗೇಟ್ ಮುಚ್ಚುವವರೆಗೆ ನಮ್ಮ ಹೋರಾಟಕ್ಕೆ ಅಂತ್ಯವಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ ಆಶಿಫ್ ಆಪತ್ಬಾಂಧವ ಪತ್ರಿಕೆಗೆ ತಿಳಿಸಿದರು.
ಈ ನಡುವೆ ಸ್ಥಳೀಯ ರಾಜಕೀಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅಗಮಿಸಿ ಧರಣಿ ನಿರತ ವೇದಿಕೆಯಲ್ಲಿ ಟೋಲ್ ಗೇಟ್ ವಿರುದ್ಧ ಮಾತನಾಡುತ್ತಾ, ರಾಜಕೀಯವಾಗಿ ಸ್ಥಳೀಯ ಸಂಸದರಿಗೆ ಹಾಗೂ ಇನ್ನಿತರರ ಹೆಸರೆತ್ತಿ ಅವಾಚ್ಯ ಶಬ್ದಗಳನ್ನು ಬಳಸಿದ ಕಾರಣಕ್ಕೆ ಗರಂ ಆದ ಆಸಿಫ್ ಆಪದ್ಬಾಂಧವ, ಇದು ಚುನಾವಣೆಯ ಕಣ ಅಲ್ಲ ಇದೊಂದು ರಾಜಕೀಯ ರಹಿತವಾಗಿ ನಡೆಯುತ್ತಿರುವ ಹೋರಾಟ ಎಂದು ಮಾಜಿ ಮೇಯರ್ ಹಾಗೂ ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು.ಪ್ರತಿಭಟನೆಯ ನಡುವೆ ವಿಶೇಷವಾಗಿ ಧರಣಿ ವೇದಿಕೆಯ ಮುಂದೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗುಂಡಿ ತೋಡಿ ಮಣ್ಣಿನೊಳಗೆ ಮಲಗಿ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿ ಸಾರ್ವಜನಿಕರ ಗಮನ ಸೆಳೆದರು.

ಸುರತ್ಕಲ್, ಕಾಟಿಪಲ್ಲ ವಲಯ ವಿವಿಧ ಸಂಘ ಸಂಸ್ಥೆಗಳ ಒಕ್ಕೂಟದ ಮುಖಂಡರಾದ ಹುಸೇನ್ ಕಾಟಿಪಲ್ಲ, ಸಲೀಂ ರಝಾಕ್, ಅಬ್ದುಲ್ ಖಯ್ಯಾಮ್, ವಾಸೀಂ, ಅಬ್ದುಲ್ ಸಮದ್, ಅಬ್ದುಲ್ ಲತೀಫ್, ಜಮಿಶೀದ್, ಅಶ್ರಫ್. ಸುರತ್ಕಲ್ ವಲಯ ಬಂಟ ಸಮುದಾಯದ ಪುಷ್ಪರಾಜ್ ಶೆಟ್ಟಿ, ಧನಂಜಯ ಶೆಟ್ಟಿ. ರಾಜ್ಯ ಡಿಜೆ-ಟ್ರಕ್ ಚಾಲಕ ಮಾಲಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಸುನಿಲ್ ಡಿಸೋಜ ಕಾರ್ಯದರ್ಶಿ ಸುಶಾಂತ್ ಶೆಟ್ಟಿ. ಹಿರಿಯ ಹೋರಾಟಗಾರ ಹರ್ಷರಾಜ್ ಮುಲ್ಕಿ, ಪ್ರಸಿದ್ಯ ಮಂಗಳೂರು, ಎಸ್ ಮೊಹಮ್ಮದ್ ತಡಂಬೈಲ್, ರಾಘವ ಇಡ್ಯಾ ಇನ್ನಿತರರು ಆಶಿಫ್ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಗುಂಡಿ ತೋಡಿ ಮಣ್ಣಿನಡಿಯಲ್ಲಿ ಮಲಗಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)