ವರದಿ: ಅದ್ದಿ ಬೊಳ್ಳೂರು.ಸುರತ್ಕಲ್, ಫೆ.12: ಸುರತ್ಕಲ್, ಎನ್ಐಟಿಕೆ ಅಕ್ರಮ ಟೋಲ್ ಗೇಟು ಸ್ಥಗಿತಗೊಳಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಆಸಿಫ್ ಆಪತ್ಬಾಂಧವ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯು ಶನಿವಾರ ಆರನೇ ದಿನಕ್ಕೆ ಕಾಲಿರಿಸಿದೆ.ಕಳೆದ ಹಲವಾರು ವರ್ಷಗಳಿಂದ ಎನ್ಐಟಿಕೆ ಅಕ್ರಮ ಅವೈಜ್ಞಾನಿಕ ಟೋಲ್ ಗೇಟ್ ವಿರುದ್ಧ ವಿವಿಧ ಸಂಘಟಿತ ಹೋರಾಟ ನಡೆಯುತ್ತಿದೆ, ಆದರೆ ರಾಜಕೀಯ ಪ್ರಭಾವದಿಂದಾಗಿ ಸರಕಾರದ ಕಾನೂನುಗಳನ್ನು ಮೀರಿ ಇಲ್ಲಿ ಅಕ್ರಮವಾಗಿ ಶುಲ್ಕ ವಸೂಲು ಮಾಡಲಾಗುತ್ತಿದೆ, ಈ ಟೋಲ್ ಗೇಟ್ ಮುಚ್ಚುವವರೆಗೆ ನಮ್ಮ ಹೋರಾಟಕ್ಕೆ ಅಂತ್ಯವಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ ಆಶಿಫ್ ಆಪತ್ಬಾಂಧವ ಪತ್ರಿಕೆಗೆ ತಿಳಿಸಿದರು.
ಈ ನಡುವೆ ಸ್ಥಳೀಯ ರಾಜಕೀಯ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅಗಮಿಸಿ ಧರಣಿ ನಿರತ ವೇದಿಕೆಯಲ್ಲಿ ಟೋಲ್ ಗೇಟ್ ವಿರುದ್ಧ ಮಾತನಾಡುತ್ತಾ, ರಾಜಕೀಯವಾಗಿ ಸ್ಥಳೀಯ ಸಂಸದರಿಗೆ ಹಾಗೂ ಇನ್ನಿತರರ ಹೆಸರೆತ್ತಿ ಅವಾಚ್ಯ ಶಬ್ದಗಳನ್ನು ಬಳಸಿದ ಕಾರಣಕ್ಕೆ ಗರಂ ಆದ ಆಸಿಫ್ ಆಪದ್ಬಾಂಧವ, ಇದು ಚುನಾವಣೆಯ ಕಣ ಅಲ್ಲ ಇದೊಂದು ರಾಜಕೀಯ ರಹಿತವಾಗಿ ನಡೆಯುತ್ತಿರುವ ಹೋರಾಟ ಎಂದು ಮಾಜಿ ಮೇಯರ್ ಹಾಗೂ ಮಾಜಿ ಶಾಸಕರನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆಯಿತು.ಪ್ರತಿಭಟನೆಯ ನಡುವೆ ವಿಶೇಷವಾಗಿ ಧರಣಿ ವೇದಿಕೆಯ ಮುಂದೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗುಂಡಿ ತೋಡಿ ಮಣ್ಣಿನೊಳಗೆ ಮಲಗಿ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಿ ಸಾರ್ವಜನಿಕರ ಗಮನ ಸೆಳೆದರು.

ಸುರತ್ಕಲ್, ಕಾಟಿಪಲ್ಲ ವಲಯ ವಿವಿಧ ಸಂಘ ಸಂಸ್ಥೆಗಳ ಒಕ್ಕೂಟದ ಮುಖಂಡರಾದ ಹುಸೇನ್ ಕಾಟಿಪಲ್ಲ, ಸಲೀಂ ರಝಾಕ್, ಅಬ್ದುಲ್ ಖಯ್ಯಾಮ್, ವಾಸೀಂ, ಅಬ್ದುಲ್ ಸಮದ್, ಅಬ್ದುಲ್ ಲತೀಫ್, ಜಮಿಶೀದ್, ಅಶ್ರಫ್. ಸುರತ್ಕಲ್ ವಲಯ ಬಂಟ ಸಮುದಾಯದ ಪುಷ್ಪರಾಜ್ ಶೆಟ್ಟಿ, ಧನಂಜಯ ಶೆಟ್ಟಿ. ರಾಜ್ಯ ಡಿಜೆ-ಟ್ರಕ್ ಚಾಲಕ ಮಾಲಕರ ಸಂಘ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರು ಸುನಿಲ್ ಡಿಸೋಜ ಕಾರ್ಯದರ್ಶಿ ಸುಶಾಂತ್ ಶೆಟ್ಟಿ. ಹಿರಿಯ ಹೋರಾಟಗಾರ ಹರ್ಷರಾಜ್ ಮುಲ್ಕಿ, ಪ್ರಸಿದ್ಯ ಮಂಗಳೂರು, ಎಸ್ ಮೊಹಮ್ಮದ್ ತಡಂಬೈಲ್, ರಾಘವ ಇಡ್ಯಾ ಇನ್ನಿತರರು ಆಶಿಫ್ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಗುಂಡಿ ತೋಡಿ ಮಣ್ಣಿನಡಿಯಲ್ಲಿ ಮಲಗಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ