ಮಂಗಳೂರು: ಇಲ್ಲಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ಹೆಸರಿನಲ್ಲಿ ವೀಡಿಯೋ ಒಂದು ಸಾಮಾಜಿಕ ತಾಣದಲ್ಲಿ ವ್ಯಾಪಕ ಪ್ರಚಾರಗೊಂಡಿದ್ದು, ಇದು ಸುಳ್ಳು ಸುದ್ದಿ ಎಂದು ಮಂಗಳೂರಿನ ಪೋಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ. ವೀಡಿಯೋ
ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ನಡೆದಿದೆ ಎಂದು ಬಿಂಬಿಸಿ ಪ್ರಚಾರಗೊಂಡಿರುವ ವೀಡಿಯೋ, ಬೇರೆ ಯಾವುದೋ ಜಿಲ್ಲೆಯಲ್ಲಿ ಯಾವಾಗಲೋ ನಡೆದ ಘಟನೆಯಾಗಿದ್ದು, ಮಂಗಳೂರಿನ ಕಮಿಷನರೇಟ್ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ನ್ಯಾಯಾಲಯದ ಆದೇಶದಂತೆ ಶಾಂತಿಯುತ ತರಗತಿ ನಡೆಸಲು ಎಲ್ಲರೂ ಸಹಕರಿಸಿದ್ದಾರೆ ಎಂದು ಕಮಿಷನರ್ ಹೇಳಿದರು.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಿಜಾಬ್ ಧರಿಸಿ ಶಿಕ್ಷಣ ಪಡೆಯುತ್ತಿದ್ದ ಮುಸ್ಲಿಂ ವಿದ್ಯಾರ್ಥಿನಿಗಳ ಶಿಕ್ಷಣವನ್ನು ಮೊಟಕುಗೊಳಿಸಲೆಂದು ಕೆಲವು ವಿದ್ಯಾರ್ಥಿಗಳು ಕೇಸರೀ ಶಾಲನ್ನು ಧರಿಸಿ ವಿವಾದವೆಬ್ಬಿಸಿರುವ ಹಿನ್ನೆಲೆಯಲ್ಲಿ, ಹಿಜಾಬ್ ಎಂಬ ಮುಸ್ಲಿಂ ಯುವತಿಯರ ಧಾರ್ಮಿಕ ಹಕ್ಕಿನ ಸಂರಕ್ಷಣೆಗಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅದರ ವಿಚಾರಣೆಯು ಹೈಕೋರ್ಟ್ ನಲ್ಲಿ ನಡೆಯುತ್ತಿದ್ದು, ಇಂದು ವಿಚಾರಣೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಾಳೆಗೆ ಮುಂದೂಡಿದೆ. ಅಂತಿಮ ತೀರ್ಪು ಬರುವ ತನಕ ಶಾಲಾ ಕಾಲೇಜುಗಳಲ್ಲಿ ಧಾರ್ಮಿಕ ಗುರುತುಗಳನ್ನು ಬಳಸಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ.
ಶಾಂತಿಯುತವಾಗಿ ತರಗತಿ ನಡೆಯುತ್ತಿರುವ ಕೆಲವು ಶಾಲಾ-ಕಾಲೇಜುಗಳನ್ನು ಬೆನ್ನೆತ್ತಿ ಕೆಲವು ಕೋಮು ವಿಷ ಬೀಜವನ್ನು ಬಿತ್ತುವ ಟಿವಿ ಮಾಧ್ಯಮಗಳು ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸಲು ನೋಡುತ್ತಿದೆ. ಇದನ್ನು ಗಮನಿಸಿದ ಹೈಕೋರ್ಟ್, ರಾಜ್ಯದಲ್ಲಿ ಶಾಂತಿಯನ್ನು ಕಾಪಾಡಲು, ಜವಾಬ್ದಾರಿಯುತ ನಾಗರಿಕರಂತೆ ವರ್ತಿಸಬೇಕು ಎಂದು ಮಾಧ್ಯಮದವರಿಗೆ ಸಲಹೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)