ಹೊಸದಿಲ್ಲಿ, ಫೆಬ್ರವರಿ.13: ಕರ್ನಾಟಕದ ಕಾಲೇಜೊಂದರಿಂದ ಹಿಜಾಬ್ ಬಗ್ಗೆ ಆರಂಭವಾದ ವಿವಾದವನ್ನು ತಡೆಯಲು ಆಗುತ್ತಿಲ್ಲ. ಹಿಜಾಬ್ ಗಲಾಟೆ ಈಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಈ ಕುರಿತು ಮತ್ತೊಮ್ಮೆ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ನಲ್ಲಿ ಉವೈಸಿ, “ಇನ್ಶಾ ಅಲ್ಲಾ ಒಂದು ದಿನ ಹಿಜಾಬಿ ಪ್ರಧಾನಿಯಾಗುತ್ತಾರೆ” ಎಂದು ಬರೆದಿದ್ದಾರೆ.
ಟ್ವೀಟ್ ವಿಡಿಯೋದಲ್ಲಿ ಮಾತನಾಡಿರುವ ಉವೈಸಿ, “ನಮ್ಮ ಹೆಣ್ಣುಮಕ್ಕಳು ಹಿಜಾಬ್ ಧರಿಸಲು ಬಯಸಿದರೆ ಅಮ್ಮ-ಅಬ್ಬಾ ಹೇಳುವರು – ಮಗು ಧರಿಸು. ಯಾರು ನಿಮ್ಮನ್ನು ತಡೆಯುತ್ತಾರೆ ಎಂದು ನಾವು ನೋಡುತ್ತೇವೆ. ಹಿಜಾಬ್ ಧರಿಸಿ, ಕಾಲೇಜಿಗೆ ಹೋಗುತ್ತಾರೆ, ಕಲೆಕ್ಟರ್ ಆಗುತ್ತಾರೆ, ಬಿಜಿನೆಸ್ ಮ್ಯಾನ್ ಆಗುತ್ತಾರೆ, ಎಸ್ಡಿಎಂ ಕೂಡ ಆಗುತ್ತಾರೆ ಮತ್ತು ಮುಂದೊಂದು ದಿನ ಈ ದೇಶದಲ್ಲಿ ಹೆಣ್ಣು ಮಗು ಹಿಜಾಬ್ ಧರಿಸಿ ಪ್ರಧಾನಿಯಾಗುತ್ತಾರೆ” ಎಂದು ಹೇಳಿದ್ದಾರೆ.
ಈ ಹಿಂದೆ ಅಸದುದ್ದೀನ್ ಉವೈಸಿ ಅವರು ಹಿಜಾಬ್ ವಿವಾದದಲ್ಲಿ ಪುಟ್ಟಸ್ವಾಮಿ ತೀರ್ಪನ್ನು ಉಲ್ಲೇಖಿಸಿದ್ದರು. ಭಾರತದ ಸಂವಿಧಾನ ನಿಖಾಬ್ ಅಥವಾ ಹಿಜಾಬ್ ಧರಿಸುವ ಹಕ್ಕನ್ನು ನೀಡಿದೆ. ಪುಟ್ಟಸ್ವಾಮಿ ಅವರ ತೀರ್ಪು ಈ ಅವಕಾಶ ನೀಡುತ್ತದೆ ಎಂದು ಉವೈಸಿ ಹೇಳಿದ್ದರು. ಇದು ನಮ್ಮ ಗುರುತು. ಆ ಹುಡುಗರ ಗುಂಪಿಗೆ ಉತ್ತರಿಸಿದ ಹುಡುಗಿಗೆ ನಾನು ನಮಸ್ಕರಿಸುತ್ತೇನೆ. ಭಯ ಮತ್ತು ಗಾಬರಿ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಚುನಾವಣಾ ರಾಲಿ ಉದ್ದೇಶಿಸಿ ಮಾತನಾಡಿದ ಉವೈಸಿ, ಯಾವುದೇ ಮುಸ್ಲಿಂ ಮಹಿಳೆ ಯಾವುದೇ ಭಯವಿಲ್ಲದೆ ಹಿಜಾಬ್ ಧರಿಸಬಹುದು ಎಂದು ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)