ಚಾಮರಾಜನಗರ: ಸಮವಸ್ತ್ರ ಸಂಬಂಧಿತ ವಿವಾದ ಉದ್ಭವಿಸಿದ್ದು ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ, ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಲ್ಲ ಅವರಿಗೆ ಯಾವುದೇ ರೀತಿಯ ವಸ್ತ್ರ ಧರಿಸಿ ಕಾಲೇಜಿಗೆ ಬರಲು ಅವಕಾಶವಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.
ಕೆಲವೊಂದು ಕಾಲೇಜಿನಲ್ಲಿ ಹೈಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು, ಶಿರವಸ್ತ್ರ ಧರಿಸಿದ ಪದವಿ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸಿ, ಪಾಠ, ಪರೀಕ್ಷೆ ನಡೆಸಿದಂತಹಾ ಪ್ರಕರಣಗಳು ಬೆಳಕಿಗೆ ಬಂದಿದ್ದವು, ಇದೀಗ ಸಚಿವರ ಸ್ಪಷ್ಟೀಕರಣದಿಂದಾಗಿ ಗೊಂದಲ ನಿವಾರಣೆಯಾಗಿದೆ.
ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ನಿಯಮಕ್ಕೆ ಅನುಸಾರವಾಗಿಯೇ ಬರಬೇಕು. ಹಿಜಾಬ್ ಧರಿಸುವುದಕ್ಕೆ ಅವಕಾಶ ಇಲ್ಲ. ಹಿಜಾಬ್ ಕೇಸರಿ ಶಾಲು ವಿಚಾರದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಅದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು’ ಎಂದರು.
ನಾಳೆಯಿಂದ ಕಾಲೇಜುಗಳು ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಅವರು ಈಗಾಗಲೇ ಸಷ್ಟಪಡಿಸಿದ್ದಾರೆ.ವಿದ್ಯಾರ್ಥಿಗಳು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡದೆ, ಸೌಹಾರ್ದತೆಯಿಂದ ಕಾಲೇಜುಗಳಿಗೆ ಹಾಜರಾಗಬೇಕು ಎಂದು ಮನವಿ ಮಾಡಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ