ಉಪ್ಪಿನಂಗಡಿ: ಫೆ 15; ಕೆಮ್ಮಾರ ಅಂಗನವಾಡಿ ಕೇಂದ್ರದ ಶಿಕ್ಷಕಿಯಾಗಿ ಮತ್ತು ಮೇಲ್ವಿಚಾರಕರಾಗಿ ಮೂರು ದಶಕಗಳ ಕಾಲ ಸೇವೆಗೈದ ನಿವೃತ್ತ ಶಿಕ್ಷಕಿ ಹೇಮಾ ರಾಮದಾಸ್ ಮತ್ತು ಅಂಗನವಾಡಿ ಸಹಾಯ ಕಾರ್ಯಕರ್ತೆಯಾಗಿ ದುಡಿದ ಹಿರಿಯರಾದ ಲೀಲಾವತಿ ಅವರಿಗೆ ಕೆಮ್ಮಾರ ಅಂಗನವಾಡಿ ಕೇಂದ್ರದ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲವಿಕಾಶ ಸಮಿತಿ ಅಧ್ಯಕ್ಷರಾದ ತೇಜಾವತಿ ವಹಿಸಿದ್ದರು, ಶ್ರೀಮತಿ ಸುಜಾತರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು, ಪ್ರಸಕ್ತ
ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಉಮಾವತಿ ಮಾತನಾಡಿ ಕೆಮ್ಮಾರ ಅಂಗನವಾಡಿ ಕೇಂದ್ರವನ್ನು ರಾಜ್ಯಕ್ಕೆ ಗುರುತಿಸುವಂತೆ ಮಾಡಿದ್ದು ಮಾತ್ರವಲ್ಲದೇ ಮೂರು ದಶಕಗಳ ಕಾಲ ಸೇವೆಗೈದ ಹೇಮಾ ರಾಮದಾಸ್ ಮತ್ತು ಲೀಲಾವತಿಯವರನ್ನು ಗುರುತಿಸಿ ಸನ್ಮಾನಿಸಿದ್ದು ಶ್ಲಾಘನೀಯ ಕಾರ್ಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಊರ ನಾಗರಿಕರು ಅಂಗನವಾಡಿ ಪೋಷಕರು ಸಂದರ್ಭೋಚಿತವಾಗಿ ಮಾತನಾಡಿದರು. ಮಾಜಿ ಗ್ರಾಮ ಪಂಚಾಯತ್ ಸದಸ್ಯೆ ಸೀತಾ ಜೆಕೆ ರವರು
ಸನ್ಮಾನಿತರ ಪರಿಚಯ ಮಾಡಿದರು.
ಹಿರೆಬಂಡಾಡಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ ಹರಿನಾರಾಯಣ ಮತ್ತು ಹಾಲಿ ಸದಸ್ಯೆ ಶ್ರೀಮತಿ ವಾರಿಜಾಕ್ಷಿ, ಎಸ್ಡಿಎಂಸಿ ಜಿಲ್ಲಾ ಕಾರ್ಯದರ್ಶಿ ಸೆಲಿಕತ್ ಸೇರಿದಂತೆ ಹಲವರು ಸನ್ಮಾನ ಕಾರ್ಯವನ್ನು ನೆರವೇರಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀಮತಿ ಹೇಮಾ ರಾಮದಾಸ್ ನಿಸ್ವಾರ್ಥ ಸೇವೆ ಮಾಡಿದ್ದೇನೆ, ಮಕ್ಕಳ ಪೋಷಕರು ಮತ್ತು ಊರ ಹಿರಿಯರ ಸಹಕಾರದಿಂದ ಮತ್ತು ಸಹಾಯಕ ಶಿಕ್ಷಕಿಯ ಜೊತೆಗೂಡುವಿಕೆಯಿಂದ ನನ್ನ ಸೇವೆ ತೃಪ್ತಿ ತಂದಿದೆ, ಸನ್ಮಾನ ನಾನು ಬಯಸಿರಲಿಲ್ಲ ನಿಮ್ಮ ಪ್ರೀತಿಗೆ ಆಭಾರಿಯಾಗಿದ್ದೇನೆ ಎಂದರು.
ಕಾರ್ಯಕ್ರಮದಲ್ಲಿ ಕೆಮ್ಮಾರ ಶಾಲಾಭಿವೃಧ್ದಿ ಸಮತಿ ಅಧ್ಯಕ್ಷರಾದ ಹಂಝ ಬಡ್ಡಮೆ ಮತ್ತು ಸಮಿತಿ ಸದಸ್ಯರು, ಚೇತನಾ ಗುಂಪಿನ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ, ದೀಪಾ ಗುಂಪಿನ ಅಧ್ಯಕ್ಷರಾದ ಹಾಝರಾ, ಬಾಲವಿಕಾಶ ಸಮಿತಿ ಸದಸ್ಯ ರವಿಕಾಂತ್, ಮಕ್ಕಳ ಪೋಷಕರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸುನಿತಾರವರು ಸ್ವಾಗತಿಸಿದರು, ಅಂಗನವಾಡಿ ಕಾರ್ಯಕರ್ತೆ ಶುಭಾವತಿ ಕಾರ್ಯಕ್ರಮ ನಿರೂಪಿಸಿದರು ಮತ್ತು ಕೆಮ್ಮಾರ ಅಂಗನವಾಡಿ ಕಾರ್ಯಕರ್ತೆ ಸುಂದರಿ ಕೆ. ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್