ಉಡುಪಿ: ನಿನ್ನೆ ಹಿಜಾಬ್ ವಿವಾದದ ಬಗ್ಗೆ ಜರುಗಿದ ಶಾಂತಿಸಭೆಯ ಬಳಿಕ ಎಸ್ಬಿಪಿಐ ಉಡುಪಿ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಶಾಂತಿಸಭೆಯಲ್ಲಿ ರಘುಪತಿ ಭಟ್ ಸಹಿತ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್, ಅಂತಿಮ ತೀರ್ಪು ಬರುವವರೆಗೆ ಎಲ್ಲಾ ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ವಸ್ತ್ರ ಧರಿಸದಂತೆ ಮಧ್ಯಂತರ ಆದೇಶ ಹೊರಡಿಸಿತ್ತು. ನ್ಯಾಯಾಲಯದ ಆದೇಶದಂತೆ ಫೆ.14 ರಂದು ಕಾಲೇಜು ಪುನರಾರಂಭಗೊಂಡಿತ್ತು. ಅದರ ಪೂರ್ವಭಾವಿಯಾಗಿ ಸರ್ವಪಕ್ಷ ಸಭೆ ಆಯೋಜಿಸಲಾಗಿತ್ತು.
ಸದ್ರಿ ಸಭೆಯಲ್ಲಿ ಎಸ್ಬಿಪಿಐ ಉಡುಪಿ ಜಿಲ್ಲಾಧ್ಯಕ್ಷರಾದ ನಝೀರ್ ಅಹ್ಮದ್ ಅವರು ನೀಡಿರುವ ಹೇಳಿಕೆಯು ಎಲ್ಲರಿಗೂ ಆಶ್ಚರ್ಯ ಮತ್ತು ಚಿಂತಾ ಚಕಿತಗೊಳಿಸಿದೆ. ನಝೀರ್ ಅಹಮದ್ ಮಾತನಾಡಿ, ಬುದ್ಧಿವಂತರ ಜಿಲ್ಲೆಯಲ್ಲಿ ನಡೆಯಬಾರದ ಘಟನೆ ನಡೆದಿದೆ. ಹಿಜಾಬ್ ವಿವಾದ ಸೌಹಾರ್ದಯುತವಾಗಿ ಬಗೆಹರಿದು ಜಿಲ್ಲೆಯಲ್ಲಿ ಶಾಂತಿ ಸೌಹಾರ್ದ ನೆಲೆಸಬೇಕು’ ಎಂದು ಅಭಿಪ್ರಾಯಪಟ್ಟರು.
ಹಿಜಾಬ್ ವಿಚಾರದಲ್ಲಿ ಕೆಲವು ವಿದ್ಯಾರ್ಥಿನಿಯರು ಸಾಂವಿಧಾನಿಕ ಹಕ್ಕುಗಳಿಗೆ ಒತ್ತಾಯಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಹಿಜಾಬ್ ಧರಿಸುವುದು, ಬಿಡುವುದು ವಿದ್ಯಾರ್ಥಿನಿಯರ ವೈಯಕ್ತಿಕ ಸ್ವಾತಂತ್ರ್ಯವಾಗಿದ್ದು ಎಸ್ಡಿಪಿಐ ಮಧ್ಯೆ ಪ್ರವೇಶಿಸುವುದಿಲ್ಲ ಎಂದರು.
ಇಷ್ಟರವರೆಗೆ ಸಿಎಫ್ಐ ಮತ್ತು ಪಿಎಫ್ಐ ನಡೆಸಿದ ಪ್ರತಿಭಟನೆಗೆ ವಿರುದ್ಧ ನಿಲುವು ಪ್ರಕಟಿಸಿದ ಬಗ್ಗೆ ನಝೀರ್ ಅವರು ಸ್ವಪಕ್ಷೀಯರಿಂದಲೇ ಟೀಕೆಗೊಳಗಾಗಿದ್ದಾರೆ.
“ಹಿಜಾಬ್ ರಹಿತವಾಗಿ ಶಾಲೆಗೆ ಕಳುಹಿಸುವುದು ಪೋಷಕರಿಗೆ ಬಿಟ್ಟ ತೀರ್ಮಾನ” ಎಂದಿದ್ದಕ್ಕೆ ಪ್ರತಿಕ್ರಿಯಿಸಿದ ಒಬ್ಬರು, ಶಾಂತಿಯುತವಾಗಿ ಬಗೆಹರಿಸಲು ಇಷ್ಟು ದಿವಸ ಪ್ರತಿಭಟನೆ ಮಾಡಿ ಈಗ ನೆನಪಾಯಿತೆ ? ಎಂದು ಪ್ರಶ್ನಿಸಿದ್ದರು.
ಮತ್ತೊಬ್ಬರು ಸಿಎಫ್ಐ ಕಾರ್ಯಕರ್ತ, ನಝೀರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡು, ಹಿಜಾಬ್ ರಹಿತವಾಗಿ ಕಾಲೇಜಿಗೆ ಕಳುಹಿಸುವುದಾದರೆ ಇಷ್ಟು ದಿವಸ ಹೋರಾಟ ಮಾಡಿದ್ದು ಯಾವ ಪುರುಷಾರ್ಥಕ್ಕೆ ಅಂತ ಕ್ರೋಧ ವ್ಯಕ್ತಪಡಿಸಿದ್ದಾರೆ.
ಮತ್ತೊಬ್ಬ ಎಸ್ಟಿಪಿಐ ಕಾರ್ಯಕರ್ತ, ಅವತ್ತು ಶಾಸಕ ಯುಟಿಕೆ ಹೇಳಿದ ಸಣ್ಣ ವಿಚಾರದ ಬಗ್ಗೆ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದೆ. ಇವತ್ತು ನಮ್ಮವರೇ ಹಿಜಾಬ್ ರಹಿತ ಹೇಳಿಕೆ ಕೊಟ್ಟು ನಮ್ಮನ್ನು ತೀವ್ರ ಮುಜುಗರಕ್ಕೀಡುಮಾಡಿದ್ದಾರೆ ಎಂದು ನೋವು ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್