ಬೆಂಗಳೂರು: ಹಿಜಾಬ್ ವಿಚಾರಕ್ಕೆ ಸಂಬಂಧಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ಮುಂದುವರಿಸಿ ಅರ್ಜಿದಾರರ ಪರ ಹಲವು ವಕೀಲರ ವಾದ ಆಲಿಸಿ ಶುಕ್ರವಾರ ಮಧ್ಯಾಹ್ನಕ್ಕೆ ಮುಂದೂಡಿಕೆ ಮಾಡಿದೆ.
ಅರ್ಜಿದಾರರ ಪರ ವಕೀಲ ರಹಮತುಲ್ಲಾ ಕೊತ್ವಾಲ್ ವಾದ ಮಂಡನೆ ನಡೆಸಿ ಧರ್ಮ ಸ್ವಾತಂತ್ರ್ಯದ ಬಗ್ಗೆ ಪ್ರಶ್ನಿಸಿದರು. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸುವುದನ್ನು ನಿರ್ಬಂಧಿಸಿರುವ ಸರ್ಕಾರದ ಕ್ರಮಕ್ಕೆ ಬಲವಾದ ವಿರೋಧ ವ್ಯಕ್ತಪಡಿಸಿ ಹಲವು ಪ್ರಶ್ನೆಗಳನ್ನು ಮುಂದಿಟ್ಟರು.
ಉತ್ತರ ನೀಡಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಈ ಬಗ್ಗೆ ಸರಿಯಾದ ಅರ್ಜಿ ಸಲ್ಲಿಸಿಲ್ಲ, ಪೇಜ್ ನಂಬರ್ ಹಾಕಿಲ್ಲ. ಕೋರ್ಟ್ ಸಮಯ ವ್ಯರ್ಥ ಮಾಡಬೇಡಿ. ಅಂತರ್ ರಾಷ್ಟ್ರೀಯ ಒಪ್ಪಂದಗಳನ್ನು ತಪ್ಪಾಗಿ ಉಲ್ಲೇಖ ಮಾಡಿದ್ದಾರೆ. ನಿಯಮದಂತೆ ನೀವು ಪ್ರಮಾಣ ಪತ್ರ ಸಲ್ಲಿಸಿದ್ದೀರಾ ? ಎಂದು ಪ್ರಶ್ನೆ ಮಾಡಿದರು.
ನ್ಯಾಯ ಪೀಠದ ಪ್ರಶ್ನೆಗೆ ವಕೀಲ ಡಾ.ವಿನೋದ್ ಕುಲಕರ್ಣಿ ನಿಯಮದಂತೆ ನಾವು ಪ್ರಮಾಣ ಪತ್ರ ಸಲ್ಲಿಸಿದ್ದೇವೆ ಎಂದು ಉತ್ತರ ನೀಡಿದ್ದಾರೆ. ವಿವಾದದಿಂದ ಮುಸ್ಲಿಂ ಹೆಣ್ಣು ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ವಿನೋದ್ ಕುಲಕರ್ಣಿ ವಾದ ಮಂಡನೆ ಮಾಡಿದ್ದಾರೆ. ಇಂದೇ ಮಧ್ಯಂತರ ಆದೇಶ ಹೊರಡಿಸಬೇಕು ಎಂದು ವಿನೋದ್ ಕುಲಕರ್ಣಿ ನ್ಯಾಯಪೀಠಕ್ಕೆ ಮನವಿ ಮಾಡಿದರಾದರೂ ಪೀಠ ವಿಚಾರಣೆ ಮುಂದೂಡಿತು.
ವಕೀಲ ಎ.ಎಂ.ದಾರ್ ಅವರ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯ ಪೀಠ ಮತ್ತೆ ಕ್ರಮವಾಗಿ ಅರ್ಜಿ ಸಲ್ಲಿಸಲು ಹೇಳಿದೆ.ಯಾರ್ಯಾರೋ ವಾದ ಮಂಡನೆಗೆ ಬರುವುದು ಸರಿಯಲ್ಲ. ಇದುವರೆಗೆ ಸರಿಯಾದ ದಿಕ್ಕಿನಲ್ಲಿ ವಾದ ಮಂಡನೆಯಾಗಿದೆ ಎಂದು ನ್ಯಾಯ ಪೀಠ ಅಸಮಾಧಾನ ಹೊರ ಹಾಕಿದೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ