ಮಂಗಳೂರು, ಫೆ.18: ಉಳ್ಳಾಲ ಸಯ್ಯಿದ್ ಮದನಿ ಅರಬಿಕ್ ಕಾಲೇಜಿನಲ್ಲಿ ಸುದೀರ್ಘ ನಾಲ್ಕು ದಶಕಗಳ ಕಾಲ ಮುದರ್ರಿಸ್ ಆಗಿದ್ದ ಪ್ರಮುಖ ವಿದ್ವಾಂಸ ಕೆ.ಎನ್. ಅಬ್ದುಲ್ಲಾ ಮುಸ್ಲಿಯಾರ್ ತಾಝೆಕ್ಕೋಡ್ (ಪೆರಿಂದಲ್ ಮಣ್ಣ, ಮಲಪ್ಪುರಂ ಜಿಲ್ಲೆ, ಕೇರಳ) ಇಂದು ಮುಂಜಾನೆ (ಫೆಬ್ರವರಿ 18,2022 ಶುಕ್ರವಾರ) ತನ್ನ ತಾಝೆಕ್ಕೋಡಿನ ವಸತಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ ತೊಂಬತ್ತೊಂದು ವಯಸ್ಸಾಗಿತ್ತು.
ತಾಝೆಕ್ಕೋಡ್ ಮೊಹಲ್ಲಾ ಖಾಝಿ ಮತ್ತು ಅಧ್ಯಕ್ಷರಾಗಿದ್ದರು.ಅವರ ನಿಧನಕ್ಕೆ ಸುನ್ನೀ ಯುವಜನ ಸಂಘ ರಾಜ್ಯ ಸಮಿತಿಯು ತೀವ್ರ ಸಂತಾಪ ವ್ಯಕ್ತಪಡಿಸಿದೆ
ಪತ್ನಿ ಆಸಿಯಾ ಮಡತ್ತೊಡಿ,ಮಕ್ಕಳಾದ ಫಾರೂಖ್,ಖದೀಜ,ಅಸ್ಮಾ,ಅಳಿಯ ಮಂಗಳೂರು ಜೆಪ್ಪು ಮುದರ್ರಿಸ್ ಮುಹಮ್ಮದ್ ಮದನಿ ಸಮೇತ ಅಪಾರ ಬಂಧು ಬಳಗ ಮತ್ತು ಸಾವಿರಾರು ಶಿಷ್ಯಂದಿರನ್ನು ಅವರು ಅಗಲಿದ್ದಾರೆ. ದಫನ ಕಾರ್ಯವು ಇಂದು ಸಂಜೆ ನಾಲ್ಕು ಗಂಟೆಗೆ ತಾಝೆಕ್ಕೋಡ್ ಜುಮಾ ಮಸ್ಜಿದ್ ಖಬರ್ಸ್ಥಾನದಲ್ಲಿ ನಡೆಯಲಿದೆ.
ತಾಜುಲ್ ಉಲಮಾರ ಶಿಷ್ಯರಲ್ಲಿ ಪ್ರಮುಖರೂ, ಸಮಸ್ತ ಮುಶಾವರ ಸದಸ್ಯರೂ ಆಗಿದ್ದ ಅವರು ಎಲ್ಲ ಜ್ಞಾನ ಶಾಖೆಗಳಲ್ಲಿ ಪರಿಣತರೂ ಕವಿಯೂ ಉಜ್ವಲ ವಾಗ್ಮಿಯೂ ಆಗಿದ್ದರು.ಅರೇಬಿಕ್ ಕವಿತೆಗಳು ಮತ್ತು ಬುರ್ದಾ ಮತ್ತು ರಝಾನತ್ನ ಕಾವ್ಯಾತ್ಮಕ ಅನುವಾದಗಳನ್ನು ಒಳಗೊಂಡಂತೆ ಅರೇಬಿಕ್ ಮತ್ತು ಮಲಯಾಳಂ ಭಾಷೆಗಳಲ್ಲಿ ವಿವಿಧ ಕೃತಿಗಳನ್ನು ರಚಿಸಿದ್ದಾರೆ. ಸಾವಿರಾರು ಮದನಿ ಉಲಮಾಗಳ ಪ್ರಧಾನ ಗುರುವರ್ಯರೂ ಆಗಿದ್ದಾರೆ.
ಅವರ ಹೆಸರಲ್ಲಿ ಎಸ್.ವೈ.ಎಸ್.ಶಾಖೆಗಳಲ್ಲಿ ಪ್ರಾರ್ಥನಾ ಸಂಗಮಗಳನ್ನು ಏರ್ಪಡಿಸಲು ಮತ್ತು ಮಯ್ಯಿತ್ ನಮಾಝ್ ನಿರ್ವಹಿಸಲು ರಾಜ್ಯಾಧ್ಯಕ್ಷ ಡಾ.ಎಮ್ಮೆಸ್ಸೆಂ ಝೈನೀ ಕಾಮಿಲ್ ವಿನಂತಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ