ಬೆಂಗಳೂರು,ಫೆ.21: ಶಿವಮೊಗ್ಗದಲ್ಲಿ ನಿನ್ನೆ ನಡೆದ ಹಿಂದೂ ಪರ ಸಂಘಟನೆ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಹೇಳಿಕೆಯನ್ನು ಮೇಲ್ಮನೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ತೀವ್ರವಾಗಿ ಖಂಡಿಸಿದ್ದಾರೆ.
ಮುಸಲ್ಮಾನ್ ಗೂಂಡಾಗಳಿಂದ ಹತ್ಯೆಯಾಗಿದೆ ಎಂಬ ಈಶ್ವರಪ್ಪ ಹೇಳಿಕೆ ಆರೋಪದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಹರಿಪ್ರಸಾದ್, ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಈಶ್ವರಪ್ಪರ ಹೇಳಿಕೆ ಸರಿಯಲ್ಲ. ಇದು ಅಶಾಂತಿ ಸೃಷ್ಟಿಸುವ ಹೇಳಿಕೆ. ಇದು ಅವರ ಸ್ಥೂಲ ಕಲ್ಪನೆ. ಅಪರಾಧಿಗಳು ಯಾರು ಎಂಬುದು ಇನ್ನೂ ತನಿಖೆಯೇ ಆಗಿಲ್ಲ. ಆಗಲೇ ಕೋಮುಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈಶ್ವರಪ್ಪ ಅವರು ಜನರನ್ನು ದಾರಿ ತಪ್ಪಿಸಲು ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ನಾವು ರಾಜೀನಾಮೆ ಕೇಳುತ್ತಿದ್ದೇವೆ. ಅದನ್ನ ಅವರು ಕೊಡಲೇಬೇಕು. ಪೋಲಿಸರ ತನಿಖೆಯಾಗದೆ ಆಪಾದನೆ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ವಿರುದ್ಧ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
ಪೋಲಿಸರು ತನಿಖೆ ನಡೆಸುವುದು ಅವರ ಜವಾಬ್ದಾರಿ. ಇಂತಹ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಏನು ಮಾಡುತ್ತಿದೆ? ಡಿ.ಕೆ ಶಿವಕುಮಾರ್ ಮೇಲೆ ಆಪಾದನೆ ಮಾಡಿ ಏನೂ ಸಾಧಿಸಲಾಗದು. ಕ್ರಿಮಿನಲ್ ಹಿನ್ನೆಲೆಯುಳ್ಳವರೇ ಸಚಿವರಾಗಿದ್ದಾರೆ ಎಂದು ಸಚಿವ ಈಶ್ವರಪ್ಪ ಅವರಿಗೆ ಹರಿಪ್ರಸಾದ್ ತಿರುಗೇಟು ನೀಡಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ