ಬೆಂಗಳೂರು,ಫೆ.21: ಶಿವಮೊಗ್ಗದಲ್ಲಿ ನಿನ್ನೆ ನಡೆದ ಹಿಂದೂ ಪರ ಸಂಘಟನೆ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಹೇಳಿಕೆಯನ್ನು ಮೇಲ್ಮನೆ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ತೀವ್ರವಾಗಿ ಖಂಡಿಸಿದ್ದಾರೆ.
ಮುಸಲ್ಮಾನ್ ಗೂಂಡಾಗಳಿಂದ ಹತ್ಯೆಯಾಗಿದೆ ಎಂಬ ಈಶ್ವರಪ್ಪ ಹೇಳಿಕೆ ಆರೋಪದ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಹರಿಪ್ರಸಾದ್, ಒಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವ ಈಶ್ವರಪ್ಪರ ಹೇಳಿಕೆ ಸರಿಯಲ್ಲ. ಇದು ಅಶಾಂತಿ ಸೃಷ್ಟಿಸುವ ಹೇಳಿಕೆ. ಇದು ಅವರ ಸ್ಥೂಲ ಕಲ್ಪನೆ. ಅಪರಾಧಿಗಳು ಯಾರು ಎಂಬುದು ಇನ್ನೂ ತನಿಖೆಯೇ ಆಗಿಲ್ಲ. ಆಗಲೇ ಕೋಮುಗಲಭೆ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಈಶ್ವರಪ್ಪ ಅವರು ಜನರನ್ನು ದಾರಿ ತಪ್ಪಿಸಲು ಹೇಳಿಕೆ ನೀಡುತ್ತಿದ್ದಾರೆ. ಈಗಾಗಲೇ ನಾವು ರಾಜೀನಾಮೆ ಕೇಳುತ್ತಿದ್ದೇವೆ. ಅದನ್ನ ಅವರು ಕೊಡಲೇಬೇಕು. ಪೋಲಿಸರ ತನಿಖೆಯಾಗದೆ ಆಪಾದನೆ ಮಾಡುತ್ತಿದ್ದಾರೆ ಎಂದು ಈಶ್ವರಪ್ಪ ವಿರುದ್ಧ ಹರಿಪ್ರಸಾದ್ ವಾಗ್ದಾಳಿ ನಡೆಸಿದರು.
ಪೋಲಿಸರು ತನಿಖೆ ನಡೆಸುವುದು ಅವರ ಜವಾಬ್ದಾರಿ. ಇಂತಹ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಏನು ಮಾಡುತ್ತಿದೆ? ಡಿ.ಕೆ ಶಿವಕುಮಾರ್ ಮೇಲೆ ಆಪಾದನೆ ಮಾಡಿ ಏನೂ ಸಾಧಿಸಲಾಗದು. ಕ್ರಿಮಿನಲ್ ಹಿನ್ನೆಲೆಯುಳ್ಳವರೇ ಸಚಿವರಾಗಿದ್ದಾರೆ ಎಂದು ಸಚಿವ ಈಶ್ವರಪ್ಪ ಅವರಿಗೆ ಹರಿಪ್ರಸಾದ್ ತಿರುಗೇಟು ನೀಡಿದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ