janadhvani

Kannada Online News Paper

ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ನಿಂದ “ಮತದಾನ ನಮ್ಮ ಹಕ್ಕು” ಕಾರ್ಯಕ್ರಮ

ಕೊಣಾಜೆ:( ಜನಧ್ವನಿ ವಾರ್ತೆ) ಉಳ್ಳಾಲ ಡಿವಿಶನ್ ವತಿಯಿಂದ “ಮತದಾನ ನಮ್ಮ ಹಕ್ಕು” ಕಾರ್ಯಕ್ರಮ ಡಿವಿಶನ್ ಅಧ್ಯಕ್ಷ ಮುನೀರ್ ಸಖಾಫಿರವರ ಅಧ್ಯಕ್ಷತೆಯಲ್ಲಿ ತಿಬ್ಲೆಪದವು ಅಲ್-ಮದೀನ ಹಾಲ್ ನಲ್ಲಿ ನಡೆಯಿತು. ಎಸ್ಸೆಸ್ಸೆಫ್ ರಾಜ್ಯ ಉಪಾಧ್ಯಕ್ಷ ಸಯ್ಯಿದ್ ಸಿಟಿಎಂ ಉಮರ್ ಅಸ್ಸಖಾಫ್ ತಂಙಳ್ ಮನ್ಶರ್ ಉದ್ಘಾಟಿಸಿದರು.

ಎಸ್ಸೆಸ್ಸೆಫ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಖ್ ಮೋಂಟುಗೋಳಿ, ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುರ್ರಶೀದ್ ಝೈನಿ ಕಾಮಿಲ್, ಜೊತೆ ಕಾರ್ಯದರ್ಶಿ ಸಿದ್ದೀಖ್ ಸಖಾಫಿ ಮೂಳೂರು, ಎಸ್.ವೈ.ಎಸ್ ಜಿಲ್ಲಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ ಶುಭ ಹಾರೈಸಿದರು. ಎಸ್ಸೆಸ್ಸೆಫ್ ದಕ್ಷಿಣ ಜಿಲ್ಲಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ, ಎಸ್ಸೆಸ್ಸೆಫ್ ಇಹ್ಸಾನ್ ರಾಜ್ಯಾಧ್ಯಕ್ಷ ಶಾಫಿ ಸಅದಿ ಬೆಂಗಳೂರು ಮುಖ್ಯ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸುಪ್ರೀಂ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಸ್ವಾದಿಖ್ ಮಾಸ್ಟರ್ ಮಲೆಬೆಟ್ಟು, ರಾಜ್ಯ ನಾಯಕರಾದ ಇಸ್ಮಾಈಲ್ ಮಾಸ್ಟರ್ ಮೊಂಟೆಪದವು,ಕೆ.ಎಚ್ ಇಸ್ಮಾಈಲ್ ಸಅದಿ ಕಿನ್ಯ, ಎಸ್.ವೈ.ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ, ಜಿಲ್ಲಾ ಎಸ್.ವೈ.ಎಸ್ ಕೋಶಾಧಿಕಾರಿ ಹನೀಫ್ ಹಾಜಿ ಉಳ್ಳಾಲ,

ಎಸ್.ವೈ.ಎಸ್ ಮಂಗಳೂರು ಝೋನ್ ಅಧ್ಯಕ್ಷ ಮುಹಮ್ಮದಲಿ ಸಖಾಫಿ,ಎಸ್.ಜೆ.ಎಂ ದೇರಳಕಟ್ಟೆ ರೇಂಜ್ ಅಧ್ಯಕ್ಷ ಇಸ್ಮಾಯಿಲ್ ಸ ಅದಿ ಉರುಮಣೆ, ಸಾಮಾಜಿಕ ಕಾರ್ಯಕರ್ತ ಅಲ್ತಾಫ್ ಕುಂಪಲ, ಎಸ್ಸೆಸ್ಸೆಫ್ ಜಿಲ್ಲಾ ಮಾಜಿ ಕೋಶಾಧಿಕಾರಿ ಫಾರೂಕ್ ತಲಪಾಡಿ ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷ ಸೆರ್ಕಳ ಇಬ್ರಾಹಿಂ ಸಖಾಫಿ, ಜಿಲ್ಲಾ ನಾಯಕ ಅಬ್ದುರ್ರಶೀದ್ ಹಾಜಿ ವಗ್ಗ, ಸಯ್ಯಿದ್ ಖುಬೈಬ್ ತಂಙಳ್ ಉಳ್ಳಾಲ, ಅಶ್ರಫ್ ಹಾಜಿ ಬಳ್ಳಾರಿ, ಮುಹಮ್ಮದ್ ಹಾಜಿ ಖಂಡಿಗ, ಡಿವಿಶನ್ ಉಪಾಧ್ಯಕ್ಷರಾದ ಫಾರೂಕ್ ಸಖಾಫಿ, ಇಬ್ರಾಹಿಂ ಅಹ್ಸನಿ, ಕೋಶಾಧಿಕಾರಿ ಶರೀಫ್ ಮುಡಿಪು, ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ, ಇನ್ನಿತರ ರಾಜ್ಯ,ಜಿಲ್ಲಾ ಹಾಗೂ ಡಿವಿಶನ್ ನಾಯಕರು ಉಪಸ್ಥಿತರಿದ್ದರು.


ಡಿವಿಶನ್ ಉಪಾಧ್ಯಕ್ಷ ತೌಸೀಫ್ ಸಅದಿ ಹರೇಕಳ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಹಮೀದ್ ತಲಪಾಡಿ ಧನ್ಯವಾದವಿತ್ತರು.

error: Content is protected !! Not allowed copy content from janadhvani.com