ಅಬುಧಾಬಿ: ಯುಎಇಯ ಎಲ್ಲಾ ವಿಮಾನ ನಿಲ್ದಾಣಗಳಿಗೆ ಭಾರತದಿಂದ ಪ್ರಯಾಣಿಸುವವರಿಗೆ ರಾಪಿಡ್ ಪಿಸಿಆರ್ ಪರೀಕ್ಷೆಯನ್ನು ಮನ್ನಾ ಮಾಡಲಾಗಿದೆ. ಈ ಹಿಂದೆ ದುಬೈ, ಶಾರ್ಜಾ ವಿಮಾನ ನಿಲ್ದಾಣಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ವಿನಾಯಿತಿಗಳನ್ನು ಘೋಷಿಸಲಾಗಿತ್ತು. ಆದರೆ, ರಾಸಲ್ ಖೈಮಾ ಮತ್ತು ಅಬುಧಾಬಿಗೂ ವಿನಾಯಿತಿ ಇರಲಿದೆ ಎಂದು ಏರ್ ಇಂಡಿಯಾ ಎಕ್ಸ್ ಪ್ರೆಸ್ ಸುತ್ತೋಲೆಯಲ್ಲಿ ತಿಳಿಸಿದೆ.
ಭಾರತದಿಂದ ಯುಎಇಗೆ ಪ್ರಯಾಣಿಸುವ ಪ್ರಯಾಣಿಕರು ನಿರ್ಗಮಿಸುವ ಮೊದಲು ಭಾರತೀಯ ವಿಮಾನ ನಿಲ್ದಾಣಗಳಲ್ಲಿನ ಕ್ಷಿಪ್ರ ಪಿಸಿಆರ್ ತಪಾಸಣೆಯನ್ನು ರದ್ದುಗೊಳಿಸಲಾಗಿದೆ, ಆದರೆ ಇತರ ಪ್ರಯಾಣದ ಷರತ್ತುಗಳನ್ನು ಪಾಲಸಬೇಕೆಂದು ಏರ್ ಇಂಡಿಯಾ ಎಕ್ಸ್ಪ್ರೆಸ್ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದೆ.
ಅಬುಧಾಬಿಯ ಅಧಿಕೃತ ವಿಮಾನಯಾನ ಸಂಸ್ಥೆಯಾದ ಇತ್ತಿಹಾದ್ ಕೂಡ ಕ್ಷಿಪ್ರ ಪಿಸಿಆರ್ ಪರೀಕ್ಷೆಯ ಅಗತ್ಯವನ್ನು ಕೈಬಿಡಲಾಗಿದೆ ಎಂದು ಪ್ರಕಟಿಸಿದೆ. ಆದಾಗ್ಯೂ, 48 ಗಂಟೆಗಳ ಒಳಗೆ ಆರ್ಟಿ ಪಿಸಿಆರ್ ಪರೀಕ್ಷೆಯ ಅವಶ್ಯಕತೆಯಲ್ಲಿ ಯಾವುದೇ ಬದಲಾವಣೆ ಇಲ್ಲ.
ಪ್ರವಾಸದ ಆರು ಗಂಟೆಯೊಳಗೆ ರಾಪಿಡ್ ಪಿಸಿಆರ್ ಪರೀಕ್ಷೆಯು ಪ್ರಯಾಣಿಕರಿಗೆ ಬಿಕ್ಕಟ್ಟು ಸೃಷ್ಟಿಸಿತ್ತು. ಹೊರಗಿನ ಲ್ಯಾಬ್ಗಳ ಕೋವಿಡ್ ರಿಪೋರ್ಟ್ ನೆಗೆಟಿವ್ ಇದ್ದರೂ, ವಿಮಾನ ನಿಲ್ದಾಣದಲ್ಲಿನ ರಾಪಿಡ್ ಟೆಸ್ಟ್ನಲ್ಲಿ ಪಾಸಿಟಿವ್ ಆಗಿ ಪ್ರಯಾಣ ಮೊಟಕುಗೊಂಡ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿತ್ತು. ಇದೀಗ ಈ ಷರತ್ತನ್ನು ಕೈಬಿಡಲಾಗಿದ್ದು, ವಲಸಿಗರು ನಿಟ್ಟುಸಿರು ಬಿಡುವಂತಾಗಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ