ಬೆಳ್ತಂಗಡಿ:ಫೆ.25: ಶಾಂತಿ ನೆಲೆಸಿರುವ ತಾಲೂಕಿನಲ್ಲಿ ನಾವೂರು ಗ್ರಾಮದ ಮುರ ಮಸೀದಿಗೆ ಬಿಯರ್ ಬಾಟಲಿಯನ್ನು ಎಸೆದು ಕೋಮುಗಲಭೆ ಸೃಷ್ಟಿಸಲು ಸಂಚು ರೂಪಿಸಿದ ಕೃತ್ಯವನ್ನು ಬೆಳ್ತಂಗಡಿ ತಾಲೂಕು ಮುಸ್ಲಿಂ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಆರೋಪಿಗಳ ವಿರುದ್ಧ ಜಾಮೀನು ರಹಿತ ಕೇಸು ದಾಖಲಿಸಿ ಕೂಡಲೇ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಬೆಳ್ತಂಗಡಿ ತಾಲೂಕು ಮುಸ್ಲಿಂ ಒಕ್ಕೂಟ ಇದರ ಅಧ್ಯಕ್ಷರಾದ B A ನಝೀರ್ ಬೆಳ್ತಂಗಡಿ ಆಗ್ರಹಿಸಿದ್ದಾರೆ.
ಮಸೀದಿ, ಮಂದಿರ, ಚರ್ಚ್ ಎಲ್ಲವೂ ಪೂಜಾ ಸ್ಥಳವಾಗಿದ್ದು, ಅವರವರ ಧರ್ಮಗಳಲ್ಲಿ ಪ್ರತ್ಯೇಕ ಭಾವನೆಗಳನ್ನು ಹೊಂದಿದೆ. ಎಲ್ಲಾ ಧರ್ಮದ ಪೂಜಾ ಕ್ಷೇತ್ರ ಮತ್ತು ಎಲ್ಲಾ ಜಾತಿಯ ಧಾರ್ಮಿಕ ಭಾವನೆಗಳನ್ನು ಗೌರವಿಸುವ ಸಮಾಜವನ್ನು ನಿರ್ಮಿಸಬೇಕೇ ಹೊರತು, ಅಂತಹ ಕೇಂದ್ರಗಳನ್ನು ಅಪವಿತ್ರ ಗೊಳಿಸಿ ಅಶಾಂತಿ ಸೃಷ್ಟಿಸುವ ಹೇಯ ಕೃತ್ಯಕ್ಕೆ ಯಾರೂ ಕೈ ಹಾಕಬಾರದು. ಧಾರ್ಮಿಕ ಕೇಂದ್ರಗಳಲ್ಲಿ ಕೋಮು ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಕೃತ್ಯ ನಡೆಸಿ ಗಲಭೆ ಸೃಷ್ಟಿಸಲು ಪ್ರಯತ್ನಿಸುವ ಕಿಡಿಗೇಡಿಗಳನ್ನು ಬಂಧಿಸಬೇಕು. ತಾಲೂಕಿನ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಹೆಚ್ಚು ಗಮನವಹಿಸಬೇಕು ಎಂದು ಒತ್ತಾಯಿಸಿದರು.
ಇಂತಹ ಘಟನೆಗಳು ಮರುಕಳಿಸಬಾರದು ಮತ್ತು ನ್ಯಾಯದ ನಿರೀಕ್ಷೆಯಲ್ಲಿರುವವರಿಗೆ ಆರೋಪಿಗಳನ್ನು ಪತ್ತೆ ಹಚ್ಚುವ ಮೂಲಕ ಭರವಸೆಯನ್ನು ಮೂಡಿಸಬೇಕಾದ ಜವಾಬ್ದಾರಿ ಠಾಣಾಧಿಕಾರಿಗಳಲ್ಲಿದೆ. ಆದ್ದರಿಂದ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ವಿದ್ಯಾರ್ಥಿನಿಯರಿಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ನಿರಾಕರಣೆ- ಕ್ರಮ ಕೈಗೊಳ್ಳಲು ಆಗ್ರಹ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
SჄS 30 ನೇ ವಾರ್ಷಿಕ ಸಮ್ಮೇಳನ ದ ಪ್ರಚಾರ: SჄS ಬೆಳ್ತಂಗಡಿ ಝೋನ್ ‘ENARGIZE-2K24’ ಯಶಸ್ವಿ
ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು- ಮುಸ್ಲಿಂ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ ಕ ಜಿಲ್ಲೆ: 75ನೇ ಸ್ವಾತಂತ್ರ್ಯ ಮಹೋತ್ಸವ ಆಚರಣೆ
ಗುರುವಾಯನಕೆರೆ: “ಗಣರಾಜ್ಯ ರಕ್ಷಿಸಿ” ಅಭಿಯಾನದ ಆಝಾದಿ ಎಕ್ಸ್’ಪೋ ಯಶಸ್ವಿ
ಗುರುವಾಯನಕೆರೆ: ಅಜಾದಿ ಎಕ್ಸ್’ ಪೋ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್: ಕ್ಯಾಂಪಸ್ ಅಸ್ಸೆಂಬ್ಲಿ ಸ್ಲೋಗನ್ ಸ್ಟಡಿ ಕ್ಲಾಸ್
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ- ನೂತನ ಪದಾಧಿಕಾರಿಗಳು
ಬೆಳ್ತಂಗಡಿ: ಮುಸ್ಲಿಂ ಮುಖಂಡ ಹೈದರ್ ನೀರ್ಸಾಲ್ ನಿಧನ