ಗುಜರಾತ್: ದೇಶವನ್ನು ಅಸ್ಥಿರಗೊಳಿಸುವ ಕ್ರಮಗಳನ್ನು ಸಂವಿಧಾನ ಬದ್ಧವಾಗಿ ವಿರೋಧಿಸಬೇಕು.ಅದಾಗಿದೆ ನೈಜ ನಾಗರಿಕ ಪ್ರಜ್ಞೆ. ಧರ್ಮ ಅಥವಾ ರಾಜಕೀಯದ ಹೆಸರಿನಲ್ಲಿ ಜನರನ್ನು ವಿಭಜಿಸುವ ಯಾವುದೇ ಪ್ರಯತ್ನವನ್ನು ವಿರೋಧಿಸುವ ಶಕ್ತಿ ಭಾರತದ ಸಂವಿಧಾನಕ್ಕಿದೆ ಎಂದು ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.
ಹಿಂಸೆ ಮತ್ತು ಭ್ರಷ್ಟಾಚಾರದಿಂದ ಸಾಧಿಸಿದ ಯಾವುದೇ ಯಶಸ್ಸು ಕೇವಲ ತಾತ್ಕಾಲಿಕ. ಸರ್ಕಾರಗಳು ಸಂವಾದದ ಮೂಲಕ ಜನರ ಆಶೋತ್ತರಗಳನ್ನು ಮುಟ್ಟಬೇಕೇ ಹೊರತು ದಮನದಿಂದಲ್ಲ ಎಂದು ಕಾಂತಪುರಂ ಹೇಳಿದರು. ಗುಜರಾತ್ನ ರಾಜ್ಕೋಟ್ನಲ್ಲಿ ನಡೆದ ಎಸ್ಎಸ್ಎಫ್ ರಾಷ್ಟ್ರೀಯ ಸಾಹಿತ್ಯೋತ್ಸವದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡತ್ತಿದ್ದರು.
ಫೆ.22 ರಿಂದ ಪ್ರಾರಂಭಗೊಂಡ ಎಸ್ಸೆಸ್ಸೆಫ್ ರಾಷ್ಟ್ರೀಯ ಸಾಹಿತ್ಯೋತ್ಸವವು ಗುಜರಾತಿನ ರಾಜ್ಕೋಟ್ ಸಮಾಪ್ತಿ ಗೊಂಡಿತು. ದೇಶದ 24 ರಾಜ್ಯಗಳು ಈ ಸಾಹಿತ್ಯೋತ್ಸವ್ನಲ್ಲಿ ಭಾಗಿಯಾಗಿತ್ತು. ವಿವಿಧ ಅಕಾಡೆಮಿಕ್ ಚರ್ಚೆಗಳು, ಸಾಹಿತ್ಯ ಸಂವಾದಗಳು ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳೊಂದಿಗೆ ಸಂಪನ್ನವಾದ ಈ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪದ್ಮಶ್ರೀ ಪ್ರೊಫೆಸರ್ ಅಖ್ತರ್ ವಾಸಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.
ಕಾಶ್ಮೀರದಿಂದ ಕನ್ಯಾಕುಮಾರಿ ವರೆಗಿನ ಇಪ್ಪತ್ತನಾಲ್ಕು ರಾಜ್ಯಗಳು ಭಾಗವಹಿಸಿದ ದೇಶದ ಸುನ್ನಿ ವಿದ್ಯಾರ್ಥಿಗಳ ಅತೀ ದೊಡ್ದ ಸ್ಪರ್ಧೆಯಲ್ಲಿ ಉತ್ತಮ ಸಾಧನೆಯನ್ನು ತೋರ್ಪಡಿಸಿ, ಚೊಚ್ಚಲ ಸಾಹಿತ್ಯ ಕಿರೀಟವನ್ನು ಕಾಶ್ಮೀರ ತನ್ನದಾಗಿಸಿಕೊಂಡಿತು. ದ್ವಿತೀಯ ಸ್ಥಾನವನ್ನು ಕರ್ನಾಟಕ ಹಾಗೂ ತೃತೀಯ ಸ್ಥಾನವನ್ನು ಕೇರಳ ಅಲಂಕರಿಸಿತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ