
ಉಡುಪಿ : ಯುದ್ದಪೀಡಿತ ರಾಷ್ಟ್ರವಾದ ಉಕ್ರೇನ್ನಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಹುತಾತ್ಮರ ಸ್ಮಾರಕ, ಅಜ್ಜರಕಾಡಿನಲ್ಲಿ ಮೊಂಬತ್ತಿ ಪ್ರತಿಭಟನೆ ನಡೆಯಿತು.
ನಮ್ಮ ದೇಶದ ಹಲವಾರು ವಿದ್ಯಾರ್ಥಿಗಳು ಉನ್ನತ ವಿದ್ಯಾರ್ಜನೆಗಾಗಿ ತೆರಳಿ ಸಿಲುಕಿದ್ದಾರೆ,ರಕ್ಷಣೆಗಾಗಿ ಭಾರತದ ರಾಯಭಾರಿ ಕಚೇರಿ ಮತ್ತು ಪ್ರಧಾನಿ, ಸಚಿವರನ್ನು ಪರಿಪರಿಯಾಗಿ ವಿನಂತಿಸುತ್ತಿದ್ದರೂ ಇನ್ನೂ ಕೂಡ ಯುದ್ದಪೀಡಿತ ರಾಷ್ಟ್ರದಲ್ಲಿ ಜೀವಭಯದಿಂದ ಕಂಗಾಲಾಗಿದ್ದಾರೆ. ಆ ಪೈಕಿ ರಾಜ್ಯದ ನವೀನ್ ಎಂಬ ವಿದ್ಯಾರ್ಥಿ ರಷ್ಯಾದ ರಾಕೆಟ್ ದಾಳಿಗೆ ಬಲಿಯಾಗಿದ್ದಾರೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ತಮ್ಮ ಪ್ರಜೆಗಳ ರಕ್ಷಿಸುವಲ್ಲಿ ವಿಫಲವಾಗಿದೆ.
ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಕದನ ಪೀಡಿತ ರಾಷ್ಟ್ರಗಳಿಂದ ವಿದ್ಯಾರ್ಥಿಗಳು ಸಹಿತ ಎಲ್ಲರನ್ನೂ ರಕ್ಷಣೆ ಮಾಡಬೇಕು. ದೇಶದ ಜನರು ವಿದೇಶಗಳಲ್ಲಿ ಜೀವದ ಅಪಾಯವನ್ನೆದುರಿಸುವಾಗ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸದೆ ಬೇಜವಾಬ್ದಾರಿಯಿಂದ ವರ್ತಿಸುವ ಪರಿಣಾಮವೇ ಕರ್ನಾಟಕ ಇಂದು ಒಂದು ಅಮೂಲ್ಯ ಜೀವವನ್ನು ಕಳೆದುಕೊಂಡಿದೆ. ಮೃತಪಟ್ಟ ವಿದ್ಯಾರ್ಥಿಯ ಕುಟುಂಬಕ್ಕೆ ತಕ್ಷಣವೇ ಪರಿಹಾರ ಘೋಷಣೆ ಮಾಡಬೇಕು ಎಂದು ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡರಾದ ನವಾಝ್ ಶೇಖ್ ಆಗ್ರಹಿಸಿದರು. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ಅಧ್ಯಕ್ಷರು ಅಸೀಲ್ ಅಕ್ರಮ್,ಜಿಲ್ಲಾ ಕಾರ್ಯದರ್ಶಿ ಸಾದಿಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಬೆಳ್ತಂಗಡಿ
ಬೆಳ್ತಂಗಡಿ : ಯುದ್ದಪೀಡಿತ ರಾಷ್ಟ್ರವಾದ ಉಕ್ರೇನ್ನಲ್ಲಿ ರಷ್ಯಾದ ರಾಕೆಟ್ ದಾಳಿಗೆ ಕರ್ನಾಟಕದ ವಿದ್ಯಾರ್ಥಿ ನವೀನ್ ಬಲಿಯಾಗಿದ್ದು, ರಕ್ಷಣೆ ನೀಡುವಲ್ಲಿ ಕೇಂದ್ರ ಸರ್ಕಾರವು ಸಂಪೂರ್ಣ ವಿಫಲವಾಗಿರುವುದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮೊಂಬತ್ತಿ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಜಿಲ್ಲಾ ನಾಯಕರಾದ ನಾಸಿರ್ ಬಂಗೇರಕಟ್ಟೆ ,ಭಾಕಿರ್ ಪುಂಜಾಲಕಟ್ಟೆ ,ಸಹಲ್ ನೀರ್ಸಾಲ್ ಉಪಸ್ಥಿತರಿದ್ದರು.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ