ಮಂಗಳೂರು: ಹಿಜಾಬ್ ಧರಿಸಿದ್ದ ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಬೆದರಿಸಿ ಹಲ್ಲೆ ಮಾಡಲು ಮುಂದಾದ ಕಾರ್ ಸ್ಟ್ರೀಟ್ ಕಾಲೇಜಿನ ವಿದ್ಯಾರ್ಥಿ ದಯಾನಂದ ಪೈ ಹಾಗೂ ಪ್ರಥಮ ದರ್ಜೆ ಕಾಲೇಜಿನ ಕೆಲವು ವಿದ್ಯಾರ್ಥಿಗಳ ದುಷ್ಕೃತ್ಯದ ವಿಡಿಯೋವೊಂದು ಇಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಈ ಸಂದರ್ಭದಲ್ಲಿ ಎಚ್ಚೆತ್ತುಕೊಂಡ ಮುಸ್ಲಿಂ ಐಕ್ಯತಾ ವೇದಿಕೆಯ ಕುದ್ರೋಳಿ ನಿಯೋಗವು ಬಂದರ್ ಪೋಲಿಸ್ ಠಾಣೆಗೆ ಭೇಟಿ ನೀಡಿದ ವೇಳೆಯಲ್ಲಿ, ಬೆದರಿಕೆಗೊಳಗಾದ ವಿದ್ಯಾರ್ಥಿನಿಯರು ದೂರು ದಾಖಲು ಮಾಡಲು ಬಂದರ್ ಠಾಣೆಯಲ್ಲಿ ಮೂರು ಘಂಟೆಗಳ ಕಾಲ ಕಾಯುತಿದ್ದ ಪ್ರಸಂಗ ಬೆಳಕಿಗೆ ಬಂದಿದೆ.
ಕೂಡಲೇ ಮಧ್ಯಪ್ರವೇಶಿಸಿ ದೂರು ದಾಖಲಿಸುವಂತೆ ಮಾತುಕತೆ ನಡೆಸುತ್ತಿದ್ದಂತೆ, ಅಲ್ಲಿಗೆ ಮಂಗಳೂರು ಕಮಿಷನರ್ ಎನ್ ಶಶಿಕುಮಾರ್ ಆಗಮಿಸುತ್ತಾರೆಂಬ ಮಾಹಿತಿ ದೊರೆತಿದ್ದು, ತಕ್ಷಣವೇ ಪೊಲೀಸ್ ಅಧಿಕಾರಿಗಳು ಕಾರ್ಯಪ್ರವರ್ತರಾಗಿ, ವಿದ್ಯಾರ್ಥಿನಿಯರನ್ನು ವಿಚಾರಿಸಿ, ದೂರು ಸ್ವೀಕರಿಸುವಂತೆ ಎಸಿಪಿ ಸೂಚಿಸಿದ್ದಾರೆ.
ನಂತರ ಮಾದ್ಯಮದೊಂದಿಗೆ ಐಕ್ಯತಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಬಿ ಅಬೂಬಕ್ಕರ್ ರವರು ಮಾಹಿತಿ ನೀಡುತ್ತಾ, ಕೂಡಲೇ ಅನ್ಯಾಯಕ್ಕೊಳಗಾದ ವಿದ್ಯಾರ್ಥಿನಿಯರಿಗೆ ನ್ಯಾಯ ಒದಗಿಸಿ ಕೊಡುವಂತೆ ಕಮಿಷನರಲ್ಲಿ ವಿನಂತಿಸಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ಮಾಜಿ ಅಧ್ಯಕ್ಷರಾದ ಕೆ ಆಶ್ರಫ್ ಮಾಜಿ ಮೇಯರ್ ಮಾತನಾಡಿ, ಇಂತಹ ಸೂಕ್ಷ್ಮ ವಿಷಯಗಳು ಬಿಗಡಾಯಿಸದಂತೆ ಎಲ್ಲಾ ಕಾಲೇಜು ಆಡಳಿತ ಮಂಡಳಿ, ಉಪನ್ಯಾಸಕರು ಕಾರ್ಯೋನ್ಮುಖರಾಗಬೇಕು.ಈ ವಿಷಯದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಮುಸ್ಲಿಂ ಐಕ್ಯತಾ ವೇದಿಕೆಯ ಅಧ್ಯಕ್ಷರಾದ ಯಾಸೀನ್ ಕುದ್ರೋಳಿ, ಕಾರ್ಪೋರೇಟರ್ ಶಂಸುದ್ದೀನ್ ಎಚ್ ಬಿಟಿ ,ಕೋಶಾಧಿಕಾರಿ ಮಕ್ಬೂಲ್ ಜಾಮಿಅ, ವೇದಿಕೆಯ ಸಂಚಾಲಕರಾದ ಅಝೀಝ್ ಕುದ್ರೋಳಿ, ಮುಝೈರ್ ಕುದ್ರೋಳಿ,ಲತೀಫ್ ಕ್ರಿಸ್ಟಲ್ ನಿಯೋಗದಲ್ಲಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ