janadhvani

Kannada Online News Paper

ಸಮಸ್ತ ಉಪಾಧ್ಯಕ್ಷರಾದ ಪಾಣಕ್ಕಾಡ್ ಹೈದರಲಿ ಶಿಹಾಬ್ ತಂಙಳ್ ವಫಾತ್

ಎರ್ನಾಕುಳಂ: ಪ್ರಮುಖ ಧಾರ್ಮಿಕ ವಿಧ್ವಾಂಸ, ಸಮಸ್ತ ಉಪಾಧ್ಯಕ್ಷ, ಮುಸ್ಲಿಂ ಲೀಗ್ ಕೇರಳ ರಾಜ್ಯಾಧ್ಯಕ್ಷರಾದ ಪಾಣಕ್ಕಾಡ್ ಹೈದರಲಿ ಶಿಹಾಬ್ ತಂಜಳ್ (74) ಅವರು ಎರ್ನಾಕುಳಂನ ಖಾಸಗಿ ಆಸ್ಪತ್ರೆಯಲ್ಲಿ ಇಂದು ವಫಾತ್ ಆಗಿದ್ದಾರೆ.

1972.ರಲ್ಲಿ ಜಾಮಿಯಾ ನೂರಿಯಾದಲ್ಲಿ ಸೇರಿದರು. 1975 ರಲ್ಲಿ ಫೈಝಿ ಪದವಿ ಪಡೆದರು.ಶಂಸುಲ್ ಉಲಮಾ ಇ.ಕೆ.ಅಬೂಬಕರ್ ಮುಸ್ಲಿಯಾರ್, ಕೊಟ್ಟುಮಲ ಅಬೂಬಕರ್ ಮುಸ್ಲಿಯಾರ್, ಎ.ಪಿ.ಮುಹಮ್ಮದ್ ಮುಸ್ಲಿಯಾರ್ ಮುಂತಾದವರು ಗುರುಗಳಾಗಿದ್ದರು.

1973ರಲ್ಲಿ ಸುನ್ನಿ ಸ್ಟೂಡೆಂಟ್ ಫೆಡರೇಶನ್ (ಎಸ್ಸೆಸ್ಸೆಫ್) ಸ್ಥಾಪಿಸಿದಾಗ ಸಯ್ಯಿದ್ ಹೈದರ್ ಅಲಿಯವರು ಅದರ ಮೊದಲ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.

ಹಲವಾರು ಮೊಹಲ್ಲಾಗಳ ಖಾಝಿಯಾಗಿದ್ದ ಅವರು ಪಟ್ಟಿಕಾಡ್ ಜಾಮಿಯಾ ನೂರಿಯಾ, ದಾರುಲ್ ಹುದಾ ಇಸ್ಲಾಮಿಕ್ ವಿಶ್ವವಿದ್ಯಾಲಯ, ಕಡಮೇರಿ ರಹ್ಮಾನಿಯಾ ಅರೇಬಿಕ್ ಕಾಲೇಜು ಮತ್ತು ನಂದಿ ದಾರುಸ್ಸಲಾಮ್ ಅರೇಬಿಕ್ ಕಾಲೇಜು ಸೇರಿದಂತೆ ನೂರಾರು ಧಾರ್ಮಿಕ ಮತ್ತು ಲೌಕಿಕ ಸಂಸ್ಥೆಗಳ ಅಧ್ಯಕ್ಷರಾಗಿದ್ದರು.

2008ರಲ್ಲಿ ಅವರು ಸಮಸ್ತದ ಮುಶಾವರಾ ಸಮಿತಿ ಸದಸ್ಯರಾಗಿ ಆಯ್ಕೆಗೊಂಡರು. ಅಕ್ಟೋಬರ್ 2, 2010 ರಂದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಆಗಸ್ಟ್ 1, 2009 ರಂದು ಸೈಯದ್ ಮುಹಮ್ಮದಲಿ ಶಿಹಾಬ್ ತಂಜಳ್ ಅವರ ಮರಣದ ನಂತರ, ಹೈದರ್ ಅಲಿ ಶಿಹಾಬ್ ತಂಜಳ್ ಅವರು ಮುಸ್ಲಿಂ ಲೀಗ್‌ನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದರು.

ಜೂನ್ 15, 1947 ರಂದು ಪಾಣಕ್ಕಾಡ್‌ನ ಕೊಡಪ್ಪನಕ್ಕಲ್‌ನಲ್ಲಿ ಜನಿಸಿದ ಅವರು ದಿವಂಗತ ಮಾಳಿಯೆಕ್ಕಲ್ ಸೈಯದ್ ಅಹ್ಮದ್ ಪೂಕೋಯ ತಂಜಳ್ (ಪಿಎಂಎಸ್‌ ಪೂಕೋಯ ತಂಜಲ್) ಮತ್ತು ಮರಿಯಮ್ ಚೆರಿಂಞ ಬೀವಿಯವರ ಮೂರನೇ ಪುತ್ರರಾಗಿದ್ದರು.