ಮಂಗಳೂರು: ಮಂಗಳವಾರ ಬೆಳಗ್ಗೆ ಹೈಕೋರ್ಟ್ ಹಿಜಾಬ್ ಕುರಿತಾಗಿ ತೀರ್ಪು ನೀಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗುತ್ತಿದ್ದು, ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ನಾವು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುತ್ತಿದ್ದೇವೆ. ಬಾಹ್ಯ ಪರೀಕ್ಷೆಗಳು ವೇಳಾಪಟ್ಟಿಯಂತೆ ಇರುತ್ತವೆ.ಎಲ್ಲಾ ಶಾಲಾ-ಕಾಲೇಜುಗಳ ಆಂತರಿಕ ಪರೀಕ್ಷೆಗಳನ್ನು ಮುಂದೂಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ವರು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ರಜೆ
ಉಡುಪಿ ಜಿಲ್ಲೆಯಲ್ಲೂ ಶಾಲೆ ಕಾಲೇಜುಗಳಿಗೆ ರಜೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ತಿಳಿಸಿದ್ದಾರೆ. ಉಭಯ ಜಿಲ್ಲೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ಮಂಗಳವಾರ ಒಂದು ದಿನದ ರಜೆ ನೀಡಲಾಗುವುದು. ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144ರಂತೆ ನಿಷೇಧಾಜ್ಞೆ ಈಗಾಗಲೇ ಜಾರಿಯಲ್ಲಿದ್ದು, ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.
ಅಲ್ಲದೆ ಜಿಲ್ಲೆಯಲ್ಲಿ ತೀರ್ಪಿಗೆ ಸಂಬಂಧಿಸಿ ಯಾವುದೇ ಪ್ರತಿಭಟನೆಯಾಗಲಿ, ಸಂಭ್ರಮಾಚರಣೆಯಾಗಲಿ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಶಿವಮೊಗ್ಗ ಸೇರಿ ರಾಜ್ಯದ ಇತರ ಸೂಕ್ಷ್ಮ ಜಿಲ್ಲೆಗಳಲ್ಲೂ ರಜೆ ನೀಡುವ ಸಾಧ್ಯತೆಗಳಿದ್ದು, ಈ ಬಗ್ಗೆ ಇನ್ನಷ್ಟೇ ಅಧಿಕೃತ ಆದೇಶ ಹೊರಬರಬೇಕಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ