ಬೆಂಗಳೂರು: ರಾಜ್ಯದ ಮದರಸಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆಯೇ? ಎಂಬ ಪ್ರಶ್ನೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಉತ್ತರ ನೀಡಿದ್ದು, ಅವು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಪರಿಶೀಲನೆ ನಡೆಸಲಾಗುವುದಿಲ್ಲ ಎಂದು ಹೇಳಿದ್ದಾರೆ.
ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿ ಕುಮಾರ್ ಅವರು ಈ ಕುರಿತಾದ ಪ್ರಶ್ನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕೇಳಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮದರಸಗಳಲ್ಲಿ ಕನ್ನಡ ಕಡ್ಡಾಯದ ಅನುಸರಣೆ ಆಗುತ್ತಿರುವ ಕುರಿತಾಗಿ ಪರಿಶೀಲನೆ ನಡೆಸಲಾಗುತ್ತಿದೆಯೇ? ಎಂಬ ಪ್ರಶ್ನೆಯನ್ನು ಕೇಳಿದ್ದರು. ಇದಕ್ಕೆ ಸಚಿವ ಸುನೀಲ್ ಕುಮಾರ್ ಉತ್ತರ ನೀಡಿ, ಮದರಸಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನಕ್ಕೆ ಒಳಪಡುವುದಿಲ್ಲ. ಅವು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಪರಿಶೀಲನೆ ನಡೆಸಲಾಗುವುದಿಲ್ಲ ಎಂದಿದ್ದಾರೆ.
ರಾಜ್ಯದ ಮದರಸಾಗಳಲ್ಲಿ ಸಹಿಷ್ಣುತೆ, ಸೌಹಾರ್ದತೆ ಕಲಿಸಲಾಗುತ್ತಿದೆ, ಮೂಲಭೂತವಾದವನ್ನಲ್ಲ
ಮುಂದುವರಿದು, ಮದರಸಗಳಲ್ಲಿ ಕನ್ನಡ ಹೇಳಿಕೊಡಲು ಯಾವ ಅರ್ಹತೆ ಹೊಂದಿರುವ ಶಿಕ್ಷಕರನ್ನು ನೇಮಿಸಲಾಗಿದೆ? ಈ ಕುರಿತು ಸರ್ಕಾರದ ನಿಲುವೇನು? ಎಂಬ ಪ್ರಶ್ನೆಗೆ, ಮದರಸಗಳು ಧಾರ್ಮಿಕ ಸಂಸ್ಥೆಗಳು ಆಗಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶಿಕ್ಷಕರನ್ನು ನೇಮಿಸುವ ಪ್ರಮೇಯ ಇರುವುದಿಲ್ಲ ಎಂದು ಉತ್ತರಿಸಲಾಗಿದೆ.
ಸದ್ಯ ರಾಜ್ಯದ ಮದರಸಗಳಲ್ಲಿ ಉರ್ದು, ಅರಬಿ ಹಾಗೂ ಸ್ಥಳೀಯ ಭಾಷೆಗಳಲ್ಲಿ ಶಿಕ್ಷಣ ನೀಡಲಾಗುತ್ತದೆ. ಆದರೆ ಮದರಸಗಳಲ್ಲಿ ಕನ್ನಡ ಕಡ್ಡಾಯಕ್ಕೆ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಸರ್ಕಾರ ಈ ಮೂಲಕ ಸ್ಪಷ್ಟಪಡಿಸಿದೆ. ರವಿ ಕುಮಾರ್ ಅವರು ರಾಜ್ಯದ ಮದರಸಾಗಳಲ್ಲಿ ಮೂಲಭೂತವಾದದ ಶಿಕ್ಷಣ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಯನ್ನು ಕೇಳಿದ್ದರು. ಆದರೆ, ಮದರಸಗಳಲ್ಲಿ ಮೂಲಭೂತವಾದದ ಶಿಕ್ಷಣ ನೀಡುತ್ತಿಲ್ಲ ಹಾಗೂ ಇತರ ದೇವರನ್ನು ಆರಾಧಿಸುವವರನ್ನು ಕೊಲ್ಲಬೇಕು ಎಂದು ಸಣ್ಣ ಮಕ್ಕಳಿಗೆ ಕಲಿಸಲಾಗುತ್ತಿಲ್ಲ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿತ್ತು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)