ಮಂಗಳೂರು: ಹಿಜಾಬ್ ಇಸ್ಲಾಮಿನ ಅತ್ಯಗತ್ಯ ಭಾಗವಲ್ಲವೆಂದು ಹೈಕೋರ್ಟ್ ನೀಡಿರುವ ತೀರ್ಪು ಇಸ್ಲಾಮೀ ಪ್ರಮಾಣಗಳನ್ನು ಅವಲಂಬಿತಗೊಂಡಿಲ್ಲವೆಂದು ಸುನ್ನೀ ಜಮ್ಇಯ್ಯತುಲ್ ಉಲಮಾ ಅಭಿಪ್ರಾಯಪಟ್ಟಿದೆ.
ಮಹಿಳೆಯರಿಗೆ ಹಿಜಾಬ್ ಕಡ್ಡಾಯ ಎನ್ನುವುದು ಖುರ್ಆನ್ ಮತ್ತು ಪ್ರವಾದಿ ವಚನಗಳ ಆದೇಶಗಳಲ್ಲಿ ಸಂಶಯಾತೀತವಾಗಿ ದಾಖಲೆ ಗೊಂಡಿದ್ದು ಜಾಗತಿಕ ಮಟ್ಟದಲ್ಲಿ ಹಿಜಾಬನ್ನು ಮುಸ್ಲಿಮ್ ಮಹಿಳೆಯರ ಸಂಕೇತವಾಗಿ ಕಾಣಲಾಗುತ್ತಿದೆ.ಇಂತಹ ಸ್ಪಷ್ಟ ವಿಷಯಗಳ ಬಗ್ಗೆ ನ್ಯಾಯಾಲಯವು ಮೇಲಿನ ತೀರ್ಪನ್ನು ನೀಡಿರುವುದು ಅಚ್ಚರಿಯನ್ನು ಹುಟ್ಟಿಸಿದೆ.
ತೀರ್ಪಿನ ಬಗ್ಗೆ ವಿದ್ವಾಂಸ ಒಕ್ಕೂಟವು ಅಧ್ಯಯನ ನಡೆಸಿ ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಸುನ್ನೀ ಜಮ್ಇಯ್ಯತುಲ್ ಉಲಮಾ ಕರ್ನಾಟಕ ಅಧ್ಯಕ್ಷ ಝೈನುಲ್ ಉಲಮಾ ಖಾಝಿ ಎಮ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಪ್ರಕಟನೆಯಲ್ಲಿ ತಿಳಿಸಿದರು.
ಹೈಕೋರ್ಟ್ ತೀರ್ಪು ನಿರಾಶೆ ತಂದಿದೆ- ಎಸ್ ವೈ ಎಸ್
ಹಿಜಾಬ್ ಕುರಿತು ಕೋರ್ಟ್ ಹೇಳಿಕೆ ಖುರ್ಆನಿನ ಆದೇಶಕ್ಕೆ ವಿರುದ್ಧ, ಹಿಜಾಬ್ ಮುಸ್ಲಿಂ ಮಹಿಳೆಯರಿಗೆ ಇಸ್ಲಾಂ ಕಡ್ಡಾಯಗೊಳಿಸಿದೆ.
ಕಾನೂನು ಹೋರಾಟ ಮುಂದುವರಿಯಲಿದ್ದು ಮುಂದಿನ ತೀರ್ಪುಗಳಲ್ಲಿ ನ್ಯಾಯ ದೊರಕುವ ಭರವಸೆಯಿದೆ ಎಂದು ಕರ್ನಾಟಕ ರಾಜ್ಯ ಎಸ್ ವೈ ಎಸ್ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ