ಹೇಗ್, ಮಾರ್ಚ್ 17: ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯವಾದ ಅಂತಾರಾಷ್ಟ್ರೀಯ ನ್ಯಾಯಾಲಯವು ಉಕ್ರೇನ್ ದಾಳಿಯನ್ನು ತಕ್ಷಣವೇ ನಿಲ್ಲಿಸುವಂತೆ ರಷ್ಯಾಕ್ಕೆ ಆದೇಶಿಸಿದೆ. ರಷ್ಯಾದ ದಾಳಿಯ ನಂತರ ಉಕ್ರೇನ್ ವಿಶ್ವಸಂಸ್ಥೆಯ ಉನ್ನತ ನ್ಯಾಯಾಲಯದ ಮೊರೆ ಹೋಗಿತ್ತು. ವಾದ-ವಿವಾದ ಆಲಿಸಿದ ಬಳಿಕ ರಷ್ಯಾದ ಪರ ಮತ್ತು ವಿರುದ್ಧವಾಗಿ ಮತ ಚಲಾಯಿಸಲು ಐಸಿಜೆ ನಿರ್ಧರಿಸಿತು. ಆದರೆ ಅತ್ಯಂತ ಅಚ್ಚರಿಯ ವಿಷಯವೆಂದರೆ ಐಸಿಜೆಯಲ್ಲಿ ಭಾರತದ ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಕೂಡ ರಷ್ಯಾದ ವಿರುದ್ಧ ಮತ ಚಲಾಯಿಸಿದ್ದಾರೆ. ಇದೇ ವೇಳೆ ಐಸಿಜೆ ಆದೇಶವನ್ನು ಅಮೆರಿಕ ಕೂಡ ಸ್ವಾಗತಿಸಿದೆ.
13 ನ್ಯಾಯಾಧೀಶರು ರಷ್ಯಾದ ವಿರುದ್ಧ ಮತ
13 ನ್ಯಾಯಾಧೀಶರು ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ರಷ್ಯಾ ವಿರುದ್ಧ ಮತ ಚಲಾಯಿಸಿದರೆ, ಕೇವಲ ಇಬ್ಬರು ಮಾತ್ರ ಪರವಾಗಿ ಮತ ಹಾಕಿದರು. ಈ 13 ನ್ಯಾಯಾಧೀಶರಲ್ಲಿ ಭಾರತೀಯ ನ್ಯಾಯಮೂರ್ತಿ ಜಸ್ಟಿಸ್ ದಲ್ವೀರ್ ಭಂಡಾರಿ ಕೂಡ ಸೇರಿದ್ದಾರೆ. ಇಬ್ಬರು ನ್ಯಾಯಾಧೀಶರಾದ ಉಪಾಧ್ಯಕ್ಷ ಕಿರಿಲ್ ಗೆವೊರ್ಜಿಯನ್ (ರಷ್ಯಾ) ಮತ್ತು ನ್ಯಾಯಾಧೀಶ ಸ್ಯೂ ಹ್ಯಾಂಕಿನ್ (ಚೀನಾ) ರಷ್ಯಾದ ಪರವಾಗಿ ಮತ ಚಲಾಯಿಸಿದರು.
ಭಾರತದ ನ್ಯಾಯಾಧೀಶ ದಲ್ವೀರ್ ಭಂಡಾರಿ ಯಾರು?
ನ್ಯಾಯಮೂರ್ತಿ ದಲ್ವೀರ್ ಭಂಡಾರಿ ಅವರು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ತಮ್ಮ ಎರಡನೇ ಅವಧಿಯನ್ನು ಪೂರ್ಣಗೊಳಿಸುತ್ತಿದ್ದಾರೆ. ಅವರು 2012ರಲ್ಲಿ ಮೊದಲ ಅವಧಿಗೆ ಆಯ್ಕೆಯಾದರು, ಬಳಿಕ ಅದು 2018 ರವರೆಗೆ ಮುಂದುವರೆಯಿತು. ದಲ್ವೀರ್ ಅವರು ಭಾರತದಿಂದ ಮರು-ನಾಮನಿರ್ದೇಶನಗೊಂಡು, ಯುಕೆ ನಾಮನಿರ್ದೇಶಿತ ನ್ಯಾಯಮೂರ್ತಿ ಗ್ರೀನ್ವುಡ್ ಅವರನ್ನು ಸೋಲಿಸುವ ಮೂಲಕ ICJ ನಲ್ಲಿ ಮತ್ತೊಂದು ಅವಧಿಯನ್ನು ಗೆದ್ದುಕೊಂಡಿದ್ದಾರೆ.
ಅಂತಾರಾಷ್ಟ್ರೀಯ ನ್ಯಾಯಾಲಯದ ಆದೇಶದ ನಂತರ, ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾವನ್ನು ತಕ್ಷಣವೇ ಐಸಿಜೆ ಆದೇಶವನ್ನು ಪಾಸಿಸುವಂತೆ ಕೇಳಿಕೊಂಡರು. ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ರಷ್ಯಾ ವಿರುದ್ಧದ ಪ್ರಕರಣದಲ್ಲಿ ಉಕ್ರೇನ್ ಸಂಪೂರ್ಣ ಜಯ ಸಾಧಿಸಿದಂತಾಗಿದೆ. ಆದೇಶವನ್ನು ನಿರ್ಲಕ್ಷಿಸುವುದು ರಷ್ಯಾವನ್ನು ಮತ್ತಷ್ಟು ಪ್ರತ್ಯೇಕಿಸುತ್ತದೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ. ರಷ್ಯಾ ಆಕ್ರಮಣವನ್ನು ತಕ್ಷಣವೇ ನಿಲ್ಲಿಸಲು ICJ ಆದೇಶಿಸಿದೆ, ಇದನ್ನು ರಷ್ಯಾ ಅನುಸರಿಸಬೇಕು. ಈ ಆದೇಶವು ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಬದ್ಧವಾಗಿದೆ ಎಂದು ಐಸಿಜೆ ಹೇಳಿದೆ.
















ಇನ್ನಷ್ಟು ಸುದ್ದಿಗಳು
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ
ನಕಲಿ ವೆಬ್ಸೈಟ್ಗಳ ವಿರುದ್ಧ ಜಾಗ್ರತೆ- ಸೌದಿ ವಾಣಿಜ್ಯ ಸಚಿವಾಲಯ ಎಚ್ಚರಿಕೆ
ಹಾರ್ಮುಜ್ ಜಲಸಂಧಿ ಸಂಘರ್ಷ: ಇರಾನ್ ಮೇಲೆ ಮತ್ತೆ ಅಮೆರಿಕ ಸೇನೆ ದಾಳಿ
ಇಸ್ರೇಲ್ ಸೈನ್ಯ ಗಾಜಾದಲ್ಲಿ ನಡೆಸಿದ ನರಮೇಧ : ಎರಡು ವರ್ಷಗಳಲ್ಲಿ 20,000 ಮಕ್ಕಳ ಹತ್ಯೆ- ವಿಶ್ವಸಂಸ್ಥೆ ವರದಿ
ಮಕ್ಕಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಧೂಳಿನ ಬಿರುಗಾಳಿ ಮುಂದುವರಿಕೆ- ಹಲವು ಭಾಗಗಳಲ್ಲಿ ಮಳೆ
ಶಾಂತಿ ಮರೀಚಿಕೆ…?: ಲೆಬನಾನ್ನಲ್ಲಿ ದಾಳಿ ತೀವ್ರಗೊಳಿಸಿದ ಇಸ್ರೇಲ್- ಮತ್ತೆ ಹಾರ್ಮುಝ್ ಬಂದ್!
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ