ಮನಾಮ: ಹವಳದ ದ್ವೀಪದಲ್ಲಿ ಕಾರ್ಯಾಚರಿಸುತ್ತಿರುವ ಬಹರೈನ್ ಕೆ.ಸಿ.ಎಫ್ ವೈವಿಧ್ಯಮಯ ಕಾರ್ಯ ಯೋಜನೆಗಳನ್ನು ಹಾಕಿಕೊಂಡು ತನ್ನ ಜೈತ್ರಯಾತ್ರೆಯನ್ನು ಮುಂದುವರಿಸುತ್ತಿದೆ.
ಸಂಘಟನಾ ಕಾರ್ಯಚಟುಟಿಕೆಗಳನ್ನು ಇನ್ನಷ್ಟು ಸಕ್ರೀಯಗೊಳಿಸುವ ನಿಟ್ಟಿನಲ್ಲಿ ಗುದೈಬಿಯ ಬಲೂಚಿ ಮಸೀದಿಯ ಸನಿಹದಲ್ಲಿರುವ ಸುಸಜ್ಜಿತವಾದ ಕೆ.ಸಿ.ಎಫ್ ಬಹರೈನ್ ನೂತನ ಕೇಂದ್ರ ಕಚೇರಿಯನ್ನು ದಿನಾಂಕ 17.03.2022 ಗುರುವಾರ ರಾತ್ರಿ 8:30 ಕ್ಕೆ ಸರಿಯಾಗಿ ಅಲ್ ಖಾದಿಸ ಚೇರ್ಮ್ಯಾನ್ ಬಹುಮಾನ್ಯರಾದ ಕಾವಲ್ ಕಟ್ಟೆ ಹಝ್ರತ್ ರವರು ನೆರವೇರಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ವಿಟ್ಟಲ್ ಜಮಾಲುದ್ದೀನ್ ರವರು ವಹಿಸಿದ್ದರು.ಕಾರ್ಯಕ್ರಮದ ಭಾಗವಾಗಿ ಜಲಾಲಿಯ ರಾತೀಬ್ ಮತ್ತು ಕೆಸಿಎಫ್ ಬಹರೈನ್ ವತಿಯಿಂದ ವಾರಕ್ಕೊಮ್ಮೆ ನಡೆಯುವ ಸ್ವಲಾತ್ ಮಜ್ಲಿಸ್ ಹಾಗೂ ಬರಾಹತ್ ದಿನದ ಪ್ರಯುಕ್ತ ದುಃಆ ಸಂಗಮವು ನಡೆಯಿತು.
ಕಾರ್ಯಕ್ರಮದಲ್ಲಿ ಕೆಸಿಎಫ್ ಐಎನ್ಸಿ ಸಾಂತ್ವನ ಅಧ್ಯಕ್ಷರಾದ ಅಲಿ ಮುಸ್ಲಿಯಾರ್, ಕೆಎಂಸಿಸಿ ಬಹರೈನ್ ಉಪಾಧ್ಯಕ್ಷರಾದ ಶಾಫಿ ಪಾರಕಟ್ಟ, ಕಲಂದರ್ ರಝ್ವಿ ಕಾವಲ್ಕಟ್ಟೆ, ರಾಷ್ಟ್ರೀಯ ಸಮಿತಿಯ,ಝೋನ್ ಸೆಕ್ಟರ್ ಗಳ ನಾಯಕರುಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತಾರರು ಉಪಸ್ಥಿತರಿದ್ದರು.
ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ ರವರು ಬಂದ ಅತಿಥಿಗಳನ್ನ ಸ್ವಾಗತಿಸಿ, ಪ್ರಕಾಶನ ಅಧ್ಯಕ್ಷರಾದ ಲತೀಫ್ ಪೇರೋಲಿ ಧನ್ಯವಾದಗೈದರು.

















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ