janadhvani

Kannada Online News Paper

ನೀರು ಸರಬರಾಜು ಆರಂಭಿಸುವಂತೆ ಒತ್ತಾಯಿಸಿ ತಲಪಾಡಿ ಗ್ರಾ.ಪಂ ಗೆ ಮುತ್ತಿಗೆ

ತಲಪಾಡಿ ( ಮಾ 21 ) : ತಲಪಾಡಿ ಗ್ರಾಮದ 1,2,3,4 ನೇ ವಾರ್ಡಿಗೆ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ನಾಗರೀಕ ಸಮಿತಿಯ ನೇತೃತ್ವದಲ್ಲಿ ಸಾರ್ವಜನಿಕರು ಇಂದು ತಲಪಾಡಿ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಗ್ರಾಮ ಸಮಿತಿ ಅಧ್ಯಕ್ಷರಾದ ಇಮ್ರಾನ್ ಪೂಮಣ್ಣು ಮುತ್ತಿಗೆಯ ನೇತೃತ್ವ ವಹಿಸಿದ್ದರು. ಗಡಿನಾಡು ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಸಿದ್ದೀಕ್ ತಲಪಾಡಿ ಮತ್ತು ಎಸ್.ಡಿ.ಪಿ.ಐ ನ ಹಕೀಮ್ ಕೆಸಿ ನಗರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.

ಒಂದು ವಾರದ ಹಿಂದೆ ಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಒ ಅವರಿಗೆ ಗಡುವು ನಿಗದಿಪಡಿಸಿ ಮನವಿ ಸಲ್ಲಿಸಿ ನೀರು ಸರಬರಾಜು ಮಾಡುವಂತೆ ಒತ್ತಾಯಿಸಲಾಗಿತ್ತು. ಆದರೆ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಇಂದು ಮುತ್ತಿಗೆ ಹಾಕಲಾಯಿತು.

ಪ್ರತಿಭಟನಾಕಾರರ ಜೊತೆ ಮಾತನಾಡಿದ ಪಂಚಾಯತ್ ಅಧಿಕಾರಿಗಳು ಇಂದಿನಿಂದಲೇ ನೀರು ಸರಬರಾಜು ಆರಂಭಿಸುವ ಬಗ್ಗೆ ಸ್ಪಷ್ಟನೆ ಕೊಟ್ಟ ಹಿನ್ನೆಲೆಯಲ್ಲಿ ಮುತ್ತಿಗೆ ಕೈ ಬಿಡಲಾಯಿತು.

ಮುತ್ತಿಗೆ ಕಾರ್ಯಕ್ರಮದಲ್ಲಿ SDPI ಗ್ರಾಮ ಸಮಿತಿಯ ಕಾರ್ಯದರ್ಶಿ ರಶೀದ್ ಇಂಜಿನಿಯರ್, ಮುಖಂಡರಾದ ಮೊಯ್ದಿನ್ ಉಚ್ಚಿಲ್, ಹಾರೂನ್, ಅಂದು, ಬಶೀರ್ , ಅಬ್ದುಲ್ಲಾ, ಸಿನಾನ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com