ತಲಪಾಡಿ ( ಮಾ 21 ) : ತಲಪಾಡಿ ಗ್ರಾಮದ 1,2,3,4 ನೇ ವಾರ್ಡಿಗೆ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ನಾಗರೀಕ ಸಮಿತಿಯ ನೇತೃತ್ವದಲ್ಲಿ ಸಾರ್ವಜನಿಕರು ಇಂದು ತಲಪಾಡಿ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಗ್ರಾಮ ಸಮಿತಿ ಅಧ್ಯಕ್ಷರಾದ ಇಮ್ರಾನ್ ಪೂಮಣ್ಣು ಮುತ್ತಿಗೆಯ ನೇತೃತ್ವ ವಹಿಸಿದ್ದರು. ಗಡಿನಾಡು ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಸಿದ್ದೀಕ್ ತಲಪಾಡಿ ಮತ್ತು ಎಸ್.ಡಿ.ಪಿ.ಐ ನ ಹಕೀಮ್ ಕೆಸಿ ನಗರ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.
ಒಂದು ವಾರದ ಹಿಂದೆ ಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಒ ಅವರಿಗೆ ಗಡುವು ನಿಗದಿಪಡಿಸಿ ಮನವಿ ಸಲ್ಲಿಸಿ ನೀರು ಸರಬರಾಜು ಮಾಡುವಂತೆ ಒತ್ತಾಯಿಸಲಾಗಿತ್ತು. ಆದರೆ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಇಂದು ಮುತ್ತಿಗೆ ಹಾಕಲಾಯಿತು.
ಪ್ರತಿಭಟನಾಕಾರರ ಜೊತೆ ಮಾತನಾಡಿದ ಪಂಚಾಯತ್ ಅಧಿಕಾರಿಗಳು ಇಂದಿನಿಂದಲೇ ನೀರು ಸರಬರಾಜು ಆರಂಭಿಸುವ ಬಗ್ಗೆ ಸ್ಪಷ್ಟನೆ ಕೊಟ್ಟ ಹಿನ್ನೆಲೆಯಲ್ಲಿ ಮುತ್ತಿಗೆ ಕೈ ಬಿಡಲಾಯಿತು.
ಮುತ್ತಿಗೆ ಕಾರ್ಯಕ್ರಮದಲ್ಲಿ SDPI ಗ್ರಾಮ ಸಮಿತಿಯ ಕಾರ್ಯದರ್ಶಿ ರಶೀದ್ ಇಂಜಿನಿಯರ್, ಮುಖಂಡರಾದ ಮೊಯ್ದಿನ್ ಉಚ್ಚಿಲ್, ಹಾರೂನ್, ಅಂದು, ಬಶೀರ್ , ಅಬ್ದುಲ್ಲಾ, ಸಿನಾನ್ ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ