ಹೊಸದಿಲ್ಲಿ,ಮಾರ್ಚ್.21: ದಿಲ್ಲಿಯಿಂದ ದೋಹಾಗೆ ತೆರಳುತ್ತಿದ್ದ ಕತಾರ್ ಏರ್ವೇಸ್ ವಿಮಾನದಲ್ಲಿ ಭಾರೀ ಅವಘಡವೊಂದು ತಪ್ಪಿದೆ. ವಿಮಾನ ಹಾರಾಟದ ಸಮಯದಲ್ಲಿ ಇದ್ದಕ್ಕಿದ್ದಂತೆ ವಿಮಾನದಿಂದ ಹೊಗೆ ಬರಲಾರಂಭಿಸಿತು, ಬಳಿಕ ಫ್ಲೈಟ್ ಅನ್ನು ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. 100 ಪ್ರಯಾಣಿಕರಿದ್ದ ಈ ವಿಮಾನದಲ್ಲಿ ತುರ್ತು ಸಂದರ್ಭದಲ್ಲಿ ವಿಮಾನವನ್ನು ಲ್ಯಾಂಡ್ ಮಾಡುವ ಮೂಲಕ ಎಲ್ಲ ಪ್ರಯಾಣಿಕರ ಪ್ರಾಣವನ್ನು ರಕ್ಷಣೆ ಮಾಡಲಾಗಿದೆ.
ಕತಾರ್ ಏರ್ವೇಸ್ನ QR579 ವಿಮಾನವು ದೆಹಲಿಯಿಂದ ದೋಹಾಗೆ ಟೇಕ್ ಆಫ್ ಆಗಿತ್ತು. ಈ ವೇಳೆ ವಿಮಾನದ ಕಾರ್ಗೋ ಹೋಲ್ಡ್ನಿಂದ ಇದ್ದಕ್ಕಿದ್ದಂತೆ ಹೊಗೆ ಬರಲಾರಂಭಿಸಿತು. ಇದಾದ ನಂತರ ವಿಮಾನವನ್ನು ಪಾಕಿಸ್ತಾನಕ್ಕೆ ತಿರುಗಿಸಲಾಯಿತು. ಬಳಿಕ ಕರಾಚಿಯಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಯಿತು ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯ ಕುರಿತು ಕತಾರ್ ಏರ್ವೇಸ್ ಪರವಾಗಿ ಹೇಳಿಕೆಯನ್ನು ನೀಡಲಾಗಿದ್ದು, ವಿಮಾನದಲ್ಲಿನ ಸಮಸ್ಯೆಯನ್ನು ಪರಿಶೀಲನೆ ಮಾಡಲಾಗುತ್ತಿದೆ. ಪ್ರಯಾಣಿಕರನ್ನು ಮತ್ತೊಂದು ವಿಮಾನದ ಮೂಲಕ ದೋಹಾಗೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಏರ್ವೇಸ್ ಹೇಳಿದೆ. ಅಲ್ಲದೆ, ಪ್ರಯಾಣಿಕರಿಗೆ ಕತಾರ್ ಏರ್ವೇಸ್ ಅನಾನುಕೂಲತೆಗಾಗಿ ಕ್ಷಮೆಯಾಚಿಸಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ