ಸಹಕಾರವೇ ನಮ್ಮ ಧ್ಯೇಯ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯಾಚರಿಸುವ ತ್ವಾಯಿಫ್ ಫೈಟರ್ಸ್ ಹೆಲ್ಪ್ ಲೈನ್ ಸಮಿತಿಯು ಹಲವಾರು ಸಾಂತ್ವನ ಕಾರ್ಯಗಳೊಂದಿಗೆ ಕಳೆದ ಐದು ವರ್ಷಗಳಿಂದ ಕಾರ್ಯಾಚರಿಸುತ್ತಾ ಬಂದಿದೆ. ನಾನಾ ಸಮಸ್ಯೆಗಳಲ್ಲಿ ಸಿಲುಕಿಕೊಂಡಿರುವ ಅನಿವಾಸಿಗರಿಗೆ ಬೇಕಾದ ಸಾಂತ್ವನ ಕಾರ್ಯವೇ ಈ ಸಮಿತಿಯ ಮುಖ್ಯ ಧ್ಯೇಯಗಳಲ್ಲಿ ಒಂದು.
ಸಮಿತಿಯ 5ನೇ ವರ್ಷದ ಮಹಾಸಭೆ ಮಾರ್ಚ್ 17 ರಂದು ತಾಯಿಫ್’ನ ಅಝೀಝಿಯಾ ಎಂಬಲ್ಲಿರುವ ಫವಾಝ್ ಬಾಯಾರ್ ರವರ ನಿವಾಸದಲ್ಲಿ ಜರುಗಿತು.
ಪ್ರಧಾನ ಕಾರ್ಯದರ್ಶಿ ಅಝ್ವೀರ್ ಬಡಕಬೈಲ್ ನೆರೆದ ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿ ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರ ಮಂಡಿಸಿದರು.
ಅಧ್ಯಕ್ಷರಾದ ಅಬ್ದುರ್ರಝಾಕ್ ಕೊಡಂಗಾಯಿಯವರ ಉದ್ಘಾಟನೆಯೊಂದಿಗೆ ತನ್ನ ಅಧ್ಯಕ್ಷ ಭಾಷಣ ಮಾಡಿ ಸಹಕಾರ ನೀಡುತ್ತಾ ಬಂದವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂಘಟನೆಯ ಸದಸ್ಯರು ರಾಜ್ಯ, ಭಾಷೆ, ವೈಯಕ್ತಿಕ ಸಂಘಟನಾ ನಿಷ್ಠೆಗಳನ್ನೆಲ್ಲ ಮರೆತು ಏಕೋದರ ಸಹೋದರರಂತೆ ಆತ್ಮಾರ್ಥವಾಗಿ ಸಹಕಾರ ನೀಡುತ್ತಾ ಬಂದಿರುವುದರಿಂದ ಹಲವಾರು ಯಶಸ್ವೀ ಸಾಧನೆಗಳನ್ನು ಮಾಡಲು ಸಾಧ್ಯವಾಯಿತೆಂಬುದನ್ನು ಸ್ಮರಿಸಿದರು.
ನಂತರ 2022/23ರ ನೂತನ ಸಾರಥಿಗಳನ್ನು ಆರಿಸಲಾಯಿತು.
ಕಾರ್ಯಕ್ರಮದ ಕೊನೆಯಲ್ಲಿ ನೂತನ ಮೀಡಿಯಾ ಕನ್ವೀನರ್ ಅಶ್ರಫ್ ಕರ್ವೇಲ್ ರವರು ಸೇರಿದ ಸಬೀಕರಿಗೆ ಧನ್ಯವಾದ ಹೇಳಿದರು.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು