ಸೌದಿ ಅರೇಬಿಯಾ: ದಮ್ಮಾಮ್ ನಲ್ಲಿ ಕಳೆದ ಏಳು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಮುಂಡಗೋಡ ನಿವಾಸಿ ನೂರ ಬಾಷಾ ಎಂಬುವವರು ತಾ: ಮಾರ್ಚ್ 9 ರಂದು ಹ್ರದಯಾಘಾತದಿಂದ ನಿಧನರಾಗಿದ್ದರು.
ಮರಣೋತ್ತರ ಕ್ರೀಯೆಗೆ ಬೇಕದ ವ್ಯವಸ್ಥೆ ಕಲ್ಪಿಸಲು ಕೆ.ಸಿ.ಎಫ್ ಬಳಿ ಸಂಭಂಧಿಕರು ಕೇಳಿಕೊಂಡಾಗ ಕೂಡಲೆ ಸ್ಪಂದಿಸಿ ಬೇಕಾದ ದಾಖಲೆ ಪತ್ರ ಹಾಗು ಭಾರತೀಯ ರಾಯಬಾರಿ ಕಛೇರಿ ಹಾಗು ಇನ್ನಿತರ ವ್ಯವಸ್ಥೆಗಳನ್ನು ಸರಿಪಡಿಸಿ ಅಂದರೆ ತಾ: ಮಾರ್ಚ್ 13 ರಂದು ದಮ್ಮಾಮ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.

ಮ್ರತರು ತಂದೆ, ತಾಯಿ ಹೆಂಡತಿ ಹಾಗು ಇಬ್ಬರು ಗಂಡು ಹಾಗು ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಈ ಒಂದು ಕಾರ್ಯದಲ್ಲಿ ಸಹಕರಿಸಿದ ಕೆ.ಸಿ.ಎಫ್ ಸಾಂತ್ವನ ತಂಡದ ನಾಯಕರಾದ ಬಾಷಾ ಗಂಗಾವಲಿ, ನಾರ್ತ್ ಮತ್ತು ಸೌತ್ ಸೆಕ್ಟರ್ ಇದರ ಸಾಂತ್ವನ ತಂಡಕ್ಕೆ ಹಾಗು ನಾಯಕರುಗಳಿಗೆ ಅದೇ ರೀತಿ ಕೆ.ಸಿ.ಎಫ್ ಹಿತೈಷಿ ಫರ್ಝಾನ್ ಇವರುಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ದಮ್ಮಾಮ್ 91 ರಲ್ಲಿ ಅಂತ್ಯಕ್ರೀಯೆ ನೆರವೇರಿಸಿ ಮ್ರತರಿಗಾಗಿ ದುಆ ಮಾಡಲಾಯಿತು.
ಮುಂಡಗೋಡ ವಕೀಲರಿಂದ ಕೆ.ಸಿ.ಎಫ್ ಗೆ ಧನ್ಯವಾದ ಪತ್ರ
ಜಾತಿ ಧರ್ಮ ಮತ ಭೇಧವಿಲ್ಲದೆ ಪ್ರವಾಸಿಗರ ಕಷ್ಟ ಕರ್ಪಣ್ಯಗಳಿಗೆ ಸದಾ ಸಾಂತ್ವನದ ಚಿಲುಮೆಯನ್ನು ಬೀರುತ್ತಿರುವ ಕನ್ನಡಿಗರ ಏಕೈಕ ಸಂಘಟನೆಯಾಗಿರುವ ಕೆ.ಸಿ.ಎಫ್ ನ ಚುರುಕು ಕಾರ್ಯಚರಣೆ ಕಂಡು ಹುಬ್ಬಳ್ಳಿ ಮಂಡಗೋಡ ವಕೀಲರಾದ ಎಮ್ ಎ ನಂದಿಕಟ್ಟಿ ಇವರು ಧನ್ಯವಾದ ಪತ್ರವನ್ನು ಕಲುಹಿಸಿ ಕೊಟ್ಟಿದ್ದಾರೆ. ಹಾಗು ಕೆ.ಸಿ.ಎಫ್ ನ ಸಹಕಾರಿಯಾಗಿ ಸದಾ ಕೈಜೋಡಿಸುವ ಬರವಸೆಯನ್ನು ನೀಡಿದ್ದಾರೆಂದು ಕೆ.ಸಿ.ಎಫ್ ನಾಯಕರು ತಿಳಿಸಿದ್ದಾರೆ.
ಸಾಂತ್ವನ ವಿಭಾಗ
KCF ದಮ್ಮಾಮ್ ಝೋನ್
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು