ಸೌದಿ ಅರೇಬಿಯಾ: ದಮ್ಮಾಮ್ ನಲ್ಲಿ ಕಳೆದ ಏಳು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಮುಂಡಗೋಡ ನಿವಾಸಿ ನೂರ ಬಾಷಾ ಎಂಬುವವರು ತಾ: ಮಾರ್ಚ್ 9 ರಂದು ಹ್ರದಯಾಘಾತದಿಂದ ನಿಧನರಾಗಿದ್ದರು.
ಮರಣೋತ್ತರ ಕ್ರೀಯೆಗೆ ಬೇಕದ ವ್ಯವಸ್ಥೆ ಕಲ್ಪಿಸಲು ಕೆ.ಸಿ.ಎಫ್ ಬಳಿ ಸಂಭಂಧಿಕರು ಕೇಳಿಕೊಂಡಾಗ ಕೂಡಲೆ ಸ್ಪಂದಿಸಿ ಬೇಕಾದ ದಾಖಲೆ ಪತ್ರ ಹಾಗು ಭಾರತೀಯ ರಾಯಬಾರಿ ಕಛೇರಿ ಹಾಗು ಇನ್ನಿತರ ವ್ಯವಸ್ಥೆಗಳನ್ನು ಸರಿಪಡಿಸಿ ಅಂದರೆ ತಾ: ಮಾರ್ಚ್ 13 ರಂದು ದಮ್ಮಾಮ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.

ಮ್ರತರು ತಂದೆ, ತಾಯಿ ಹೆಂಡತಿ ಹಾಗು ಇಬ್ಬರು ಗಂಡು ಹಾಗು ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಈ ಒಂದು ಕಾರ್ಯದಲ್ಲಿ ಸಹಕರಿಸಿದ ಕೆ.ಸಿ.ಎಫ್ ಸಾಂತ್ವನ ತಂಡದ ನಾಯಕರಾದ ಬಾಷಾ ಗಂಗಾವಲಿ, ನಾರ್ತ್ ಮತ್ತು ಸೌತ್ ಸೆಕ್ಟರ್ ಇದರ ಸಾಂತ್ವನ ತಂಡಕ್ಕೆ ಹಾಗು ನಾಯಕರುಗಳಿಗೆ ಅದೇ ರೀತಿ ಕೆ.ಸಿ.ಎಫ್ ಹಿತೈಷಿ ಫರ್ಝಾನ್ ಇವರುಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ದಮ್ಮಾಮ್ 91 ರಲ್ಲಿ ಅಂತ್ಯಕ್ರೀಯೆ ನೆರವೇರಿಸಿ ಮ್ರತರಿಗಾಗಿ ದುಆ ಮಾಡಲಾಯಿತು.
ಮುಂಡಗೋಡ ವಕೀಲರಿಂದ ಕೆ.ಸಿ.ಎಫ್ ಗೆ ಧನ್ಯವಾದ ಪತ್ರ
ಜಾತಿ ಧರ್ಮ ಮತ ಭೇಧವಿಲ್ಲದೆ ಪ್ರವಾಸಿಗರ ಕಷ್ಟ ಕರ್ಪಣ್ಯಗಳಿಗೆ ಸದಾ ಸಾಂತ್ವನದ ಚಿಲುಮೆಯನ್ನು ಬೀರುತ್ತಿರುವ ಕನ್ನಡಿಗರ ಏಕೈಕ ಸಂಘಟನೆಯಾಗಿರುವ ಕೆ.ಸಿ.ಎಫ್ ನ ಚುರುಕು ಕಾರ್ಯಚರಣೆ ಕಂಡು ಹುಬ್ಬಳ್ಳಿ ಮಂಡಗೋಡ ವಕೀಲರಾದ ಎಮ್ ಎ ನಂದಿಕಟ್ಟಿ ಇವರು ಧನ್ಯವಾದ ಪತ್ರವನ್ನು ಕಲುಹಿಸಿ ಕೊಟ್ಟಿದ್ದಾರೆ. ಹಾಗು ಕೆ.ಸಿ.ಎಫ್ ನ ಸಹಕಾರಿಯಾಗಿ ಸದಾ ಕೈಜೋಡಿಸುವ ಬರವಸೆಯನ್ನು ನೀಡಿದ್ದಾರೆಂದು ಕೆ.ಸಿ.ಎಫ್ ನಾಯಕರು ತಿಳಿಸಿದ್ದಾರೆ.
ಸಾಂತ್ವನ ವಿಭಾಗ
KCF ದಮ್ಮಾಮ್ ಝೋನ್
















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ