ನವದೆಹಲಿ: ಬಿಜೆಪಿ ನಾಯಕರು ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಪರ ಪ್ರಚಾರ ಮುಂದುವರಿಸಿದ್ದರೆ, ವಿರೋಧ ಪಕ್ಷಗಳ ಕೆಲವು ಮುಖಂಡರು ಕಿಡಿ ಕಾರುತ್ತಿದ್ದಾರೆ. ಆ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವ ವಿಚಾರದಲ್ಲಿ ಕೇಜ್ರಿವಾಲ್ ಅವರನ್ನು ಬಿಜೆಪಿ ಮುಖಂಡ ಅಮಿತ್ ಮಾಳವಿಯಾ ‘ಅರ್ಬನ್ ನಕ್ಸಲ್’ ಎಂದು ಟೀಕಿಸಿದ್ದಾರೆ.
ಕಾಶ್ಮೀರ್ ಫೈಲ್ಸ್ ಸಿನಿಮಾ ಬಗ್ಗೆ ಪ್ರಸ್ತಾಪಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ‘… ಸುಳ್ಳಿನ ಸಿನಿಮಾಗಳ ಪೋಸ್ಟರ್ ಸಹ ಹಾಕುವುದಿಲ್ಲ…’ ಎಂದು ಗುರುವಾರ ವಿಧಾನಸಭೆಯಲ್ಲಿ ಹೇಳಿದ್ದರು.
‘ಬಿಜೆಪಿಗರು ದೆಹಲಿಯಲ್ಲಿ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಕೇಳುತ್ತಿದ್ದಾರೆ. ಆ ಚಿತ್ರದ ನಿರ್ಮಾಣ ಮಾಡಿರುವವರು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಬಹುದು. ಇದರಿಂದ ಸಿನಿಮಾವನ್ನು ಉಚಿತವಾಗೇ ನೋಡಲು ಸಾಧ್ಯವಾಗುತ್ತದೆ. ಎಲ್ಲರೂ ಚಿತ್ರವನ್ನು ವೀಕ್ಷಿಸಬಹುದು’ ಎಂದು ಕೇಜ್ರಿವಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆ ಮಾತಿಗೆ ಇಡೀ ಸದನ ನಗೆಗಡಲಲ್ಲಿ ತೇಲಿತ್ತು.
ಕೇಜ್ರಿವಾಲ್ ಅವರು 2016 ‘ನಿಲ್ ಬಟ್ಟೆ ಸನ್ನಾಟಾ’ ಮತ್ತು 2019ರಲ್ಲಿ ‘ಸಾಂಡ್ ಕಿ ಆಂಖ್’ ಸಿನಿಮಾಗಳಿಗೆ ದೆಹಲಿಯಲ್ಲಿ ತೆರಿಗೆ ವಿನಾಯಿತಿ ನೀಡಿದ್ದರ ಬಗ್ಗೆ ಪ್ರಕಟಿಸಿದ್ದ ಹಳೆಯ ಟ್ವೀಟ್ಗಳ ಸ್ಕ್ರೀನ್ಶಾಟ್ಗಳನ್ನು ಬಿಜೆಪಿ ನಾಯಕರು ಹಂಚಿಕೊಳ್ಳುತ್ತಿದ್ದಾರೆ. ‘ಕೇಜ್ರಿವಾಲ್ ಎಕ್ಸ್ಪೋಸ್ಡ್’ ಎಂಬ ಟ್ಯಾಗ್ ಟ್ವಿಟರ್ನಲ್ಲಿ ಟ್ರೆಂಡ್ ಆಗಿದೆ.
ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಮಾತನಾಡುತ್ತ ಕೇಜ್ರಿವಾಲ್ ನಗುತ್ತಿರುವ ವಿಡಿಯೊ ಅನ್ನು ಹಂಚಿಕೊಂಡಿರುವ ಅಮಿತ್ ಮಾಳವಿಯಾ, ‘ಕೇಜ್ರಿವಾಲ್ ಅವರು ಹಿಂದೆ ಆ ಸಿನಿಮಾಗಳನ್ನು ಯುಟ್ಯೂಬ್ನಲ್ಲಿ ಹಾಕುವಂತೆ ಏಕೆ ಸಲಹೆ ನೀಡಲಿಲ್ಲ? ದೆಹಲಿಯಲ್ಲಿ ಏಕೆ ತೆರಿಗೆ ವಿನಾಯಿತಿ ನೀಡಲಾಯಿತು?….ಕಾಶ್ಮೀರ್ ಫೈಲ್ಸ್ ಹಿಂದೂಗಳ ಹತ್ಯೆಗಳ ಕುರಿತಾದುದು, ಹಾಗಾಗಿಯೇ ಈ ಅರ್ಬನ್ ನಕ್ಸಲ್ಗೆ ಹೊಟ್ಟೆಯಲ್ಲಿ ಉರಿ ಕಾಣಿಸಿಕೊಂಡಿದೆ’ ಎಂದು ಮೂದಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಸಚಿವರು, ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಮುಖಂಡರು ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಪರವಾಗಿ ಮಾತನಾಡಿದ್ದಾರೆ. ಬಿಜೆಪಿ ಆಡಳಿತವಿರುವ ಹಲವು ರಾಜ್ಯಗಳಲ್ಲಿ ಆ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.
‘ಬಿಜೆಪಿಯವರು ಸಿನಿಮಾದ ಪೋಸ್ಟರ್ಅನ್ನು ಅಂಟಿಸುತ್ತಿದ್ದಾರೆ. ಹಿಟ್ಲರ್ ಕೂಡ ತನ್ನ ಗುಲಾಮರಿಗೆ ಉದ್ಯೋಗವನ್ನು ನೀಡಿದ್ದ. ನಿಮಗೆ ಅವರೇನು (ಮೋದಿ) ಕೊಟ್ಟಿದ್ದಾರೆ? ಏನೇ ಆದರೂ ಕೇಜ್ರಿವಾಲ್ ನಿಮಗಾಗಿ ಕೆಲಸ ಮಾಡಲು ಸಿದ್ಧ… ‘ ಎಂದು ಕೇಜ್ರಿವಾಲ್ ಹೇಳಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ