ಉಳ್ಳಾಲ ( ಮಾ 25 ) : ಕುತ್ತಾರಿನಲ್ಲಿ ವಿಶ್ವ ಹಿಂದೂ ಪರಿಷತ್ ಏರ್ಪಡಿಸಿದ್ದ ನಮ್ಮ ನಡೆ ಕೊರಗಜ್ಜ ಕ್ಷೇತ್ರದ ಕಡೆ ಎಂಬ ಕಾರ್ಯಕ್ರಮದಲ್ಲಿ ತ್ರಿವರ್ಣ ಬದಲಾಯಿಸಿ ಕೇಸರಿ ಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುತ್ತೇವೆ ಮತ್ತು ಜನಗಣಮನವನ್ನು ಬದಲಾಯಿಸಿ ವಂದೇ ಮಾತರಂ ಅನ್ನು ರಾಷ್ಟ್ರ ಗೀತೆಯನ್ನಾಗಿ ಮಾಡುತ್ತೇವೆ ಎಂದು ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯನ್ನು ಹಿಯಾಳಿಸಿ ರಾಷ್ಟ್ರದ್ರೋಹವೆಸಗಿರುವ ಆರ್.ಎಸ್.ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ವಿರುಧ್ಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಮುನ್ನೂರು ಗ್ರಾಮ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತುತ್ತಾ, ದೇಶ ವಿರೋಧಿ ಹೇಳಿಕೆ ನೀಡುತ್ತಾ ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಪ್ರಭಾಕರ ಭಟ್ ಮೇಲೆ ಇಲಾಖೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿರುವ ಎಸ್.ಡಿ.ಪಿ.ಐ ದೂರಿನ ಜೊತೆ ಪ್ರಭಾಕರ ಭಟ್ ಮಾಡಿದ ರಾಷ್ಟ್ರದ್ರೋಹಿ ಭಾಷಣದ ವಿಡಿಯೋ ಸಿಡಿಯನ್ನೂ ಸಲ್ಲಿಸಿದೆ.
ದೂರು ನೀಡಿದ ನಿಯೋಗದಲ್ಲಿ ಎಸ್.ಡಿ.ಪಿ.ಐ ಉಳ್ಳಾಲ ಕ್ಷೇತ್ರ ಸಮಿತಿ ಸದಸ್ಯ ಸುಹೈಲ್ ಉಳ್ಳಾಲ್, ಮುನ್ನೂರು ಗ್ರಾಮ ಸಮಿತಿ ಅಧ್ಯಕ್ಷರಾದ ಝುಬೈರ್, ಕಾರ್ಯದರ್ಶಿ ಮುನೀರ್, ಸದಸ್ಯರಾದ ರಹಿಮಾನ್,ಫಾರೂಕ್, ಜಬ್ಬಾರ್ ಸಂತೋಷ್ ನಗರ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ