ಉಳ್ಳಾಲ ( ಮಾ 25 ) : ಕುತ್ತಾರಿನಲ್ಲಿ ವಿಶ್ವ ಹಿಂದೂ ಪರಿಷತ್ ಏರ್ಪಡಿಸಿದ್ದ ನಮ್ಮ ನಡೆ ಕೊರಗಜ್ಜ ಕ್ಷೇತ್ರದ ಕಡೆ ಎಂಬ ಕಾರ್ಯಕ್ರಮದಲ್ಲಿ ತ್ರಿವರ್ಣ ಬದಲಾಯಿಸಿ ಕೇಸರಿ ಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುತ್ತೇವೆ ಮತ್ತು ಜನಗಣಮನವನ್ನು ಬದಲಾಯಿಸಿ ವಂದೇ ಮಾತರಂ ಅನ್ನು ರಾಷ್ಟ್ರ ಗೀತೆಯನ್ನಾಗಿ ಮಾಡುತ್ತೇವೆ ಎಂದು ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯನ್ನು ಹಿಯಾಳಿಸಿ ರಾಷ್ಟ್ರದ್ರೋಹವೆಸಗಿರುವ ಆರ್.ಎಸ್.ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ವಿರುಧ್ಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಮುನ್ನೂರು ಗ್ರಾಮ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತುತ್ತಾ, ದೇಶ ವಿರೋಧಿ ಹೇಳಿಕೆ ನೀಡುತ್ತಾ ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಪ್ರಭಾಕರ ಭಟ್ ಮೇಲೆ ಇಲಾಖೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿರುವ ಎಸ್.ಡಿ.ಪಿ.ಐ ದೂರಿನ ಜೊತೆ ಪ್ರಭಾಕರ ಭಟ್ ಮಾಡಿದ ರಾಷ್ಟ್ರದ್ರೋಹಿ ಭಾಷಣದ ವಿಡಿಯೋ ಸಿಡಿಯನ್ನೂ ಸಲ್ಲಿಸಿದೆ.
ದೂರು ನೀಡಿದ ನಿಯೋಗದಲ್ಲಿ ಎಸ್.ಡಿ.ಪಿ.ಐ ಉಳ್ಳಾಲ ಕ್ಷೇತ್ರ ಸಮಿತಿ ಸದಸ್ಯ ಸುಹೈಲ್ ಉಳ್ಳಾಲ್, ಮುನ್ನೂರು ಗ್ರಾಮ ಸಮಿತಿ ಅಧ್ಯಕ್ಷರಾದ ಝುಬೈರ್, ಕಾರ್ಯದರ್ಶಿ ಮುನೀರ್, ಸದಸ್ಯರಾದ ರಹಿಮಾನ್,ಫಾರೂಕ್, ಜಬ್ಬಾರ್ ಸಂತೋಷ್ ನಗರ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ