ಉಳ್ಳಾಲ ( ಮಾ 25 ) : ಕುತ್ತಾರಿನಲ್ಲಿ ವಿಶ್ವ ಹಿಂದೂ ಪರಿಷತ್ ಏರ್ಪಡಿಸಿದ್ದ ನಮ್ಮ ನಡೆ ಕೊರಗಜ್ಜ ಕ್ಷೇತ್ರದ ಕಡೆ ಎಂಬ ಕಾರ್ಯಕ್ರಮದಲ್ಲಿ ತ್ರಿವರ್ಣ ಬದಲಾಯಿಸಿ ಕೇಸರಿ ಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುತ್ತೇವೆ ಮತ್ತು ಜನಗಣಮನವನ್ನು ಬದಲಾಯಿಸಿ ವಂದೇ ಮಾತರಂ ಅನ್ನು ರಾಷ್ಟ್ರ ಗೀತೆಯನ್ನಾಗಿ ಮಾಡುತ್ತೇವೆ ಎಂದು ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯನ್ನು ಹಿಯಾಳಿಸಿ ರಾಷ್ಟ್ರದ್ರೋಹವೆಸಗಿರುವ ಆರ್.ಎಸ್.ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ವಿರುಧ್ಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಮುನ್ನೂರು ಗ್ರಾಮ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತುತ್ತಾ, ದೇಶ ವಿರೋಧಿ ಹೇಳಿಕೆ ನೀಡುತ್ತಾ ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಪ್ರಭಾಕರ ಭಟ್ ಮೇಲೆ ಇಲಾಖೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿರುವ ಎಸ್.ಡಿ.ಪಿ.ಐ ದೂರಿನ ಜೊತೆ ಪ್ರಭಾಕರ ಭಟ್ ಮಾಡಿದ ರಾಷ್ಟ್ರದ್ರೋಹಿ ಭಾಷಣದ ವಿಡಿಯೋ ಸಿಡಿಯನ್ನೂ ಸಲ್ಲಿಸಿದೆ.
ದೂರು ನೀಡಿದ ನಿಯೋಗದಲ್ಲಿ ಎಸ್.ಡಿ.ಪಿ.ಐ ಉಳ್ಳಾಲ ಕ್ಷೇತ್ರ ಸಮಿತಿ ಸದಸ್ಯ ಸುಹೈಲ್ ಉಳ್ಳಾಲ್, ಮುನ್ನೂರು ಗ್ರಾಮ ಸಮಿತಿ ಅಧ್ಯಕ್ಷರಾದ ಝುಬೈರ್, ಕಾರ್ಯದರ್ಶಿ ಮುನೀರ್, ಸದಸ್ಯರಾದ ರಹಿಮಾನ್,ಫಾರೂಕ್, ಜಬ್ಬಾರ್ ಸಂತೋಷ್ ನಗರ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ