ಉಳ್ಳಾಲ ( ಮಾ 25 ) : ಕುತ್ತಾರಿನಲ್ಲಿ ವಿಶ್ವ ಹಿಂದೂ ಪರಿಷತ್ ಏರ್ಪಡಿಸಿದ್ದ ನಮ್ಮ ನಡೆ ಕೊರಗಜ್ಜ ಕ್ಷೇತ್ರದ ಕಡೆ ಎಂಬ ಕಾರ್ಯಕ್ರಮದಲ್ಲಿ ತ್ರಿವರ್ಣ ಬದಲಾಯಿಸಿ ಕೇಸರಿ ಧ್ವಜವನ್ನು ರಾಷ್ಟ್ರಧ್ವಜವನ್ನಾಗಿ ಮಾಡುತ್ತೇವೆ ಮತ್ತು ಜನಗಣಮನವನ್ನು ಬದಲಾಯಿಸಿ ವಂದೇ ಮಾತರಂ ಅನ್ನು ರಾಷ್ಟ್ರ ಗೀತೆಯನ್ನಾಗಿ ಮಾಡುತ್ತೇವೆ ಎಂದು ರಾಷ್ಟ್ರ ಧ್ವಜ ಮತ್ತು ರಾಷ್ಟ್ರಗೀತೆಯನ್ನು ಹಿಯಾಳಿಸಿ ರಾಷ್ಟ್ರದ್ರೋಹವೆಸಗಿರುವ ಆರ್.ಎಸ್.ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್ ವಿರುಧ್ಧ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ( SDPI ) ಮುನ್ನೂರು ಗ್ರಾಮ ಸಮಿತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಧರ್ಮಗಳ ನಡುವೆ ಕೋಮು ವಿಷ ಬೀಜ ಬಿತ್ತುತ್ತಾ, ದೇಶ ವಿರೋಧಿ ಹೇಳಿಕೆ ನೀಡುತ್ತಾ ಸಮಾಜದಲ್ಲಿ ಅಶಾಂತಿ ಉಂಟು ಮಾಡಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಪ್ರಭಾಕರ ಭಟ್ ಮೇಲೆ ಇಲಾಖೆ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದಿರುವ ಎಸ್.ಡಿ.ಪಿ.ಐ ದೂರಿನ ಜೊತೆ ಪ್ರಭಾಕರ ಭಟ್ ಮಾಡಿದ ರಾಷ್ಟ್ರದ್ರೋಹಿ ಭಾಷಣದ ವಿಡಿಯೋ ಸಿಡಿಯನ್ನೂ ಸಲ್ಲಿಸಿದೆ.
ದೂರು ನೀಡಿದ ನಿಯೋಗದಲ್ಲಿ ಎಸ್.ಡಿ.ಪಿ.ಐ ಉಳ್ಳಾಲ ಕ್ಷೇತ್ರ ಸಮಿತಿ ಸದಸ್ಯ ಸುಹೈಲ್ ಉಳ್ಳಾಲ್, ಮುನ್ನೂರು ಗ್ರಾಮ ಸಮಿತಿ ಅಧ್ಯಕ್ಷರಾದ ಝುಬೈರ್, ಕಾರ್ಯದರ್ಶಿ ಮುನೀರ್, ಸದಸ್ಯರಾದ ರಹಿಮಾನ್,ಫಾರೂಕ್, ಜಬ್ಬಾರ್ ಸಂತೋಷ್ ನಗರ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)