ಕರ್ನಾಟಕ ಕಲ್ಚರಲ್ ಫೌಂಡೇಶನ್ ಬಹರೈನ್ ರಾಷ್ಟೀಯ ಸಮಿತಿಯ ಮಹಾಸಭೆಯು ದಿನಾಂಕ 25/03/2022 ಶುಕ್ರವಾರ ಜುಮಾ ನಮಾಝಿನ ಬಳಿಕ ಬಹರೈನ್ ದಿ ಎಂ ಸೂಟ್ ಹಾಲ್ ನಲ್ಲಿ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಲ ರವರ ಅಧ್ಯಕ್ಷತೆಯಲ್ಲಿ, ಅಂತರಾಷ್ಟ್ರೀಯ ಸಮಿತಿ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಅಲಿ ಮುಸ್ಲಿಯಾರ್ ರವರ ದುಆ ದೊಂದಿಗೆ ಆರಂಭಗೊಂಡಿತು. ದರ್ವೇಶ್ ಮುಹಮ್ಮದ್ ಅಲಿ ರವರು ಕಾರ್ಯಕ್ರಮದಲ್ಲಿ ಖಿರಾಅತ್ ಪಾರಾಯಣ ಮಾಡಿದರು.

ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯರವರು ಸ್ವಾಗತ ಭಾಷಣವನ್ನು ಮಾಡಿದ ಕಾರ್ಯಕ್ರಮವನ್ನು ಬಹು|ಅಲಿ ಮುಸ್ಲಿಯಾರ್ ರವರು ಉದ್ಘಾಟಿಸಿದರು.


2019-2022 ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ ವಾಚಿಸಿದರು. ವಾರ್ಷಿಕ ಲೆಕ್ಕ ಪತ್ರವನ್ನು ಕೋಶಾಧಿಕಾರಿ ಸೂಫೀ ಪೈಂಬಚ್ಚಾಲ್ ರವರು ಮಂಡಿಸಿದರು. ಅಧ್ಯಕ್ಷೀಯ ಭಾಷಣದಲ್ಲಿ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಲ ರವರು ಕೆಸಿಎಫ್ ಕಳೆದ ಎಂಟು ವರ್ಷಗಳ ಕಾಲ ಮಾಡಿರುವ ಸಾಧನೆಗಳನ್ನು ವಿವರಿಸಿ, ಕೆಸಿಎಫ್ ಬಹರೈನಿನ ಉನ್ನತಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.


ನಂತರ 2019 -21 ನೇ ಸಾಲಿನ ಸಮಿತಿಯನ್ನು ಬರ್ಕಾಸ್ತುಗೊಳಿಸಿ, 2022-23 ನೇ ಸಾಲಿನ ಹೊಸ ಸಮಿತಿಯ ಪಧಾಧಿಕಾರಿಗಳನ್ನು ಅಂತರಾಷ್ಟ್ರೀಯ ಸಮಿತಿಯಿಂದ ರಿಟರ್ನಿಂಗ್ ಆಫೀಸರ್ ಆಗಿ ಬಂದ ಹಾಜಿ ಅಬೂಬಕ್ಕರ್ ರೈಸ್ಕೊರವರ ನೇತ್ರತ್ವದಲ್ಲಿ ಈ ಕೆಳಗಿನಂತೆ ಆಯ್ಕೆ ಮಾಡಲಾಯಿತು.
ಅಧ್ಯಕ್ಷರು: ಜಮಾಲುದ್ದೀನ್ ವಿಟ್ಲ
ಪ್ರ.ಕಾರ್ಯದರ್ಶಿ: ಹಾರಿಸ್ ಸಂಪ್ಯ
ಕೋಶಾಧಿಕಾರಿ: ಸೂಫಿ ಪೈಂಬಚ್ಚಾಲ್
ಸಂಘಟನಾ ಇಲಾಖೆ
ಅಧ್ಯಕ್ಷರು: ಕಲಂದರ್ ಮುಸ್ಲಿಯಾರ್ ಕಕ್ಕೆಪದವು
ಕಾರ್ಯದರ್ಶಿ: ಮನ್ಸೂರ್ ಬೆಳ್ಮ
ಶಿಕ್ಷಣ ಇಲಾಖೆ
ಅಧ್ಯಕ್ಷರು: ಸಿದ್ದೀಕ್ ಉಸ್ತಾದ್
ಕಾರ್ಯದರ್ಶಿ: ಅಶ್ರಫ್ ರೆಂಜಾಡಿ
ಸಾಂತ್ವನ ಇಲಾಖೆ
ಅಧ್ಯಕ್ಷರು: ಹನೀಫ್ ಗುರುವಾಯನಕೆರೆ
ಕಾರ್ಯದರ್ಶಿ: ಅನ್ಸಾರ್ ಬಜ್ಪೆ
ಆಡಳಿತ ಇಲಾಖೆ
ಅಧ್ಯಕ್ಷರು: ಸವಾದ್ ಉಳ್ಳಾಲ್
ಕಾರ್ಯದರ್ಶಿ: ತೌಫೀಕ್ ಬೆಳ್ತಂಗಡಿ
ಇಹ್ಸಾನ್ ಇಲಾಖೆ
ಅಧ್ಯಕ್ಷರು: ಶಾಫಿ ಮಾದಾಪುರ
ಕಾರ್ಯದರ್ಶಿ: ಸಮದ್ ಉಜಿರೆಬೆಟ್ಟು
ಪಬ್ಲಿಕೇಷನ್ ಇಲಾಖೆ
ಅಧ್ಯಕ್ಷರು: ಲತೀಫ್ ಪೆರೋಲಿ
ಕಾರ್ಯದರ್ಶಿ: ಹನೀಫ್ ಕೀನ್ಯಾ
ಹಾಗೂ 22 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆರಿಸಲಾಯ್ತು.


ಅಂತರಾಷ್ಟ್ರೀಯ ಸಮಿತಿ ಕೌನ್ಸಿಲರ್ ಗಳಾಗಿ ಅಲೀ ಮುಸ್ಲಿಯಾರ್, ಜಮಾಲುದ್ದೀನ್ ವಿಟ್ಲ, ಫಾರೂಕ್ ಎಸ್.ಎಂ, ಬಶೀರ್ ಕಾರ್ಲೆ, ಹಾರಿಸ್ ಸಂಪ್ಯ, ಸೂಫಿ ಪಯಂಬಚಾಲ್, ಕಲಂದರ್ ಮುಸ್ಲಿಯಾರ್ ಕಕ್ಕೆಪದವು ರವರನ್ನು ನೇಮಿಸಲಾಯಿತು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಅಲ್ ಖಾದಿಸ ಚೇರ್ಮಾನ್ ಹಝ್ರತ್ ಮುಹಮ್ಮದ್ ಪಾಝಿಲ್ ರಝ್ವಿ ಕಾವಲ್ಕಟ್ಟೆಯವರು ಕಾರ್ಯಕರ್ತರಿಗೆ ಹಿತೋಪದೇಶವನ್ನು ನೀಡಿದರು. ಅಂತರಾಷ್ಟ್ರೀಯ ಸಮಿತಿ ಕೌನ್ಸಿಲರ್ ಬಶೀರ್ ಕಾರ್ಲೆ ನೂತನ ಸಮಿತಿಗೆ ಶುಭವನ್ನುಕೋರಿದರು. ಸಂಘಟನಾ ಇಲಾಖೆಯ ಅಧ್ಯಕ್ಷರಾದ ಕಲಂದರ್ ಮುಸ್ಲಿಯಾರ್ ಕಕ್ಕೆಪದವು ನಿರೂಪಿಸಿದ ಕಾರ್ಯಕ್ರಮದಲ್ಲಿ ಪಬ್ಲಿಕೇಶನ್ ಇಲಾಖೆಯ ಅಧ್ಯಕ್ಷರಾದ ಲತೀಫ್ ಪೇರೋಲಿ ಧನ್ಯವಾದ ಹೇಳಿದರು.


















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ