ಮಂಗಳೂರು : ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರು ಆಯಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯಬಹುದಾಗಿದೆ. ಇದು ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಮಾತ್ರ ಅನ್ವಯವಾಗಲಿದೆ. ಸರಕಾರಿ ಶಾಲೆಗಳ ವಿದ್ಯಾರ್ಥಿನಿ ಯರು ಸರಕಾರ ರೂಪಿಸಿದ ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸ್ಪಷ್ಟಪಡಿಸಿದ್ದಾರೆ.
ಮಾ.25ರ ರಾಜ್ಯ ಸರಕಾರದ ಆದೇಶದಂತೆ ಪರೀಕ್ಷಾ ಕೇಂದ್ರಗಳಿಗೆ ಸರಕಾರಿ/ಅನುದಾನಿತ ಶಾಲೆಗಳ ವಿದ್ಯಾರ್ಥಿನಿಯರು ಸರಕಾರ ನಿಗದಿಪಡಿಸಿದ ಸಮವಸ್ತ್ರದಲ್ಲಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಆಡಳಿತ ಮಂಡಳಿ ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅವಕಾಶವಿದೆ ಎಂದು ಡಿಸಿ ತಿಳಿಸಿದ್ದಾರೆ.
ಅಲ್ಲದೆ ಹಿಜಾಬ್ ಸಮವಸ್ತ್ರವನ್ನಾಗಿ ಹೊಂದಿರುವ ಶಾಲೆಗಳ ವಿದ್ಯಾರ್ಥಿಗಳು ಯಾವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲಿದ್ದಾರೆ ಎಂಬ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಡೆದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.
ಈಗಾಗಲೆ ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸುತ್ತಿರುವ ವಿದ್ಯಾರ್ಥಿನಿಯರು ಶಾಲಾ ಮುಖ್ಯಸ್ಥರ ಸಹಿಯುಳ್ಳ ಪತ್ರವನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ತೋರಿಸಿ ಪರೀಕ್ಷೆ ಬರೆಯಬಹುದಾಗಿದೆ ಎಂದು ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಬ್ಯಾರಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ