ಮಂಗಳೂರು : ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರು ಆಯಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯಬಹುದಾಗಿದೆ. ಇದು ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಮಾತ್ರ ಅನ್ವಯವಾಗಲಿದೆ. ಸರಕಾರಿ ಶಾಲೆಗಳ ವಿದ್ಯಾರ್ಥಿನಿ ಯರು ಸರಕಾರ ರೂಪಿಸಿದ ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸ್ಪಷ್ಟಪಡಿಸಿದ್ದಾರೆ.
ಮಾ.25ರ ರಾಜ್ಯ ಸರಕಾರದ ಆದೇಶದಂತೆ ಪರೀಕ್ಷಾ ಕೇಂದ್ರಗಳಿಗೆ ಸರಕಾರಿ/ಅನುದಾನಿತ ಶಾಲೆಗಳ ವಿದ್ಯಾರ್ಥಿನಿಯರು ಸರಕಾರ ನಿಗದಿಪಡಿಸಿದ ಸಮವಸ್ತ್ರದಲ್ಲಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಆಡಳಿತ ಮಂಡಳಿ ನಿಗದಿಪಡಿಸಿದ ಸಮವಸ್ತ್ರವನ್ನು ಧರಿಸಿಕೊಂಡು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಅವಕಾಶವಿದೆ ಎಂದು ಡಿಸಿ ತಿಳಿಸಿದ್ದಾರೆ.
ಅಲ್ಲದೆ ಹಿಜಾಬ್ ಸಮವಸ್ತ್ರವನ್ನಾಗಿ ಹೊಂದಿರುವ ಶಾಲೆಗಳ ವಿದ್ಯಾರ್ಥಿಗಳು ಯಾವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲಿದ್ದಾರೆ ಎಂಬ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಡೆದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.
ಈಗಾಗಲೆ ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸುತ್ತಿರುವ ವಿದ್ಯಾರ್ಥಿನಿಯರು ಶಾಲಾ ಮುಖ್ಯಸ್ಥರ ಸಹಿಯುಳ್ಳ ಪತ್ರವನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ತೋರಿಸಿ ಪರೀಕ್ಷೆ ಬರೆಯಬಹುದಾಗಿದೆ ಎಂದು ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಬ್ಯಾರಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ