janadhvani

Kannada Online News Paper

ಕಾಂಗ್ರೆಸ್ ಮುಖಂಡನ ಮೇಲೆ ಸೌದಿಯಲ್ಲಿ ಹಲ್ಲೆ- ಎಸ್ಡಿಪಿಐ ಕಾರ್ಯಕರ್ತನ ಬಂಧನ

ಎಸ್ಡಿಪಿಐ ಪಕ್ಷದ ರಾಜಕೀಯ ನಡೆಯನ್ನು ಪ್ರಶ್ನಿಸಿ ಹಮೀದ್ ರವರು ವಾಟ್ಸಾಪ್ ಗ್ರೂಪ್ ಒಂದರಲ್ಲಿ ವಾಯ್ಸ್ ಬಿಟ್ಟ ವಿಚಾರವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ರಿಯಾದ್: ಇಲ್ಲಿನ ಬಟ್ಟೆ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ನಿವಾಸಿ, ಕಾಂಗ್ರೆಸ್ ಮುಖಂಡ ಎಮ್.ಎಚ್.ಹಮೀದ್ ಅವರ ಮೇಲೆ ನಾಲ್ವರ ಗುಂಪೊಂದು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

ಇತ್ತೀಚೆಗೆ ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದದ ಬಗ್ಗೆ ಎಸ್ಡಿಪಿಐ ಪಕ್ಷದ ರಾಜಕೀಯ ನಡೆಯನ್ನು ಪ್ರಶ್ನಿಸಿ ಹಮೀದ್ ರವರು ವಾಟ್ಸಾಪ್ ಗ್ರೂಪ್ ಒಂದರಲ್ಲಿ ವಾಯ್ಸ್ ಬಿಟ್ಟ ವಿಚಾರವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.

ನಿನ್ನೆ ತಡ ರಾತ್ರಿ ಅಂಗಡಿ ಮುಚ್ಚಿ ತನ್ನ ಸಹೋದ್ಯೋಗಿಯೊಂದಿಗೆ ರೂಮ್ ಕಡೆ ತೆರಳುತ್ತಿದ್ದ ಸಂಧರ್ಭದಲ್ಲಿ ಹೊಂಚು ಹಾಕಿ ಕುಳಿತಿದ್ದ ಎಸ್ಡಿಪಿಐ ಕಾರ್ಯಕರ್ತರು ಎನ್ನಲಾದ ನಾಲ್ವರು ಹಮೀದ್ ಅವರ ಮೇಲೆ ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ತಡೆಯಲು ತಡೆಯಲು ಯತ್ನಿಸಿದ ಸಹೋದ್ಯೋಗಿ ಮೇಲೂ ತಂಡ ಹಲ್ಲೆ ನಡೆಸಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿ ಸೌದಿ, ರಿಯಾದ್ ಪೋಲಿಸರ ವಶದಲ್ಲಿದ್ದು, ಮಿಕ್ಕ ಮೂವರು ಆರೋಪಿಗಳಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

error: Content is protected !! Not allowed copy content from janadhvani.com