ರಿಯಾದ್: ಇಲ್ಲಿನ ಬಟ್ಟೆ ಅಂಗಡಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ನಿವಾಸಿ, ಕಾಂಗ್ರೆಸ್ ಮುಖಂಡ ಎಮ್.ಎಚ್.ಹಮೀದ್ ಅವರ ಮೇಲೆ ನಾಲ್ವರ ಗುಂಪೊಂದು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.
ಇತ್ತೀಚೆಗೆ ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದದ ಬಗ್ಗೆ ಎಸ್ಡಿಪಿಐ ಪಕ್ಷದ ರಾಜಕೀಯ ನಡೆಯನ್ನು ಪ್ರಶ್ನಿಸಿ ಹಮೀದ್ ರವರು ವಾಟ್ಸಾಪ್ ಗ್ರೂಪ್ ಒಂದರಲ್ಲಿ ವಾಯ್ಸ್ ಬಿಟ್ಟ ವಿಚಾರವಾಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ.
ನಿನ್ನೆ ತಡ ರಾತ್ರಿ ಅಂಗಡಿ ಮುಚ್ಚಿ ತನ್ನ ಸಹೋದ್ಯೋಗಿಯೊಂದಿಗೆ ರೂಮ್ ಕಡೆ ತೆರಳುತ್ತಿದ್ದ ಸಂಧರ್ಭದಲ್ಲಿ ಹೊಂಚು ಹಾಕಿ ಕುಳಿತಿದ್ದ ಎಸ್ಡಿಪಿಐ ಕಾರ್ಯಕರ್ತರು ಎನ್ನಲಾದ ನಾಲ್ವರು ಹಮೀದ್ ಅವರ ಮೇಲೆ ದಾಳಿ ಮಾಡಿದ್ದು, ಈ ಸಂದರ್ಭದಲ್ಲಿ ತಡೆಯಲು ತಡೆಯಲು ಯತ್ನಿಸಿದ ಸಹೋದ್ಯೋಗಿ ಮೇಲೂ ತಂಡ ಹಲ್ಲೆ ನಡೆಸಿದೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿ ಸೌದಿ, ರಿಯಾದ್ ಪೋಲಿಸರ ವಶದಲ್ಲಿದ್ದು, ಮಿಕ್ಕ ಮೂವರು ಆರೋಪಿಗಳಿಗಾಗಿ ಪೋಲಿಸರು ಬಲೆ ಬೀಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ