ರಾಮನಗರ: ಹಿಂದೂ ಪರಿಷತ್, ಭಜರಂಗದಳದವರು ಕಿಡಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿದೆಯಾ. ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು ಅದೇ ಸಮಾಜದವರೇ ಬರಬೇಕು ಈಗ ಹಲಾಲ್ – ಜಟ್ಕಾ ಕಟ್ ಅಂತಿದ್ದೀರಲ್ಲ ನೀವು ನಿಮ್ಮ ಜಟ್ಕಾ ಮಾಡೋಕು, ಇನ್ನೊಂದು ಮಾಡೋಕು ಅವರೇ ಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಷ್ಮೆ, ಮಾವು ಬೆಳೆ ಮಾರಾಟಕ್ಕೆ ಈ ಪೋಲಿಗಳು ಬರ್ತಾರಾ. ಅಕಾಲಿಕ ಮಳೆಯಿಂದಾಗಿ ಮಾವು ನಷ್ಟವಾಗಿದೆ. ಅದನ್ನ ಖರೀದಿ ಮಾಡಲು ಆ ಸಮಾಜದವರೇ ಬರಬೇಕು. ವಿಶ್ವ ಹಿಂದೂ ಪರಿಷತ್ನವರು ಭಜರಂಗದಳದವರು. ಇವರ ಹೊಟ್ಟೆಪಾಡಿಗೆ, ದೇಶ ಹಾಳು ಮಾಡಲು ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ. ಇಷ್ಟು ವರ್ಷ ಹಲಾಲ್ ತಿಂದಿದ್ದೇವೆ, ಏನಾಗಿದೆ..? ಈಗ ಹಲಾಲ್ ತಿಂದರೆ ತೊಂದರೆ ಆಗುತ್ತದಾ..?, ನಮ್ಮ ದೇವರು ಮೆಚ್ಚಲ್ವಾ..? ಎಂದು ಪ್ರಶ್ನಿಸಿದ್ದಾರೆ.
ಇನ್ನು ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರು. ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಆಗಲಿಲ್ಲ. ಆಗ ಎಲ್ಲಿದ್ದರೂ ವಿಶ್ವ ಹಿಂದೂ ಪರಿಷತ್, ಭಜರಂಗದಳದವರು. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ, ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಹಲಾಲ್ ವಿವಾದವನ್ನು ತಡೆಯಲಿ. ಸರ್ಕಾರ ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು, ಅದರ ಅರ್ಥ ಏನು. ಸಮಾಜ ಹೊಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ. ನನಗೆ ಮತ ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಬದುಕಬೇಕು. ನಾನು ಮೌನವಾಗಿರಲು ಸಾಧ್ಯವಿಲ್ಲ. ಈ ಬಗ್ಗೆ ಮಾತನಾಡಲು ಕಾಂಗ್ರೆಸ್ನವರಿಗೆ ತಾಕತ್ತಿಲ್ಲ ಎಂದು ಕಿಡಿಕಾರಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)